Connect with us

Dvgsuddi Kannada | online news portal | Kannada news online

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 87 ಜವಾನ ಹುದ್ದೆ  ಸೇರಿ 133 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

job

ಪ್ರಮುಖ ಸುದ್ದಿ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 87 ಜವಾನ ಹುದ್ದೆ  ಸೇರಿ 133 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಖಾಲಿ ಇರುವ 133 ಹುದ್ದೆ ಭರ್ತಿ ಮಾಡಲು ಅರ್ಜಿ  ಆಹ್ವಾನಿಸಿದೆ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಏಪ್ರಿಲ್ 21,2022 ರಿಂದ ಮೇ 20,2022ರೊಳಗೆ ಅರ್ಜಿ  ಸಲ್ಲಿಸಬೇಕಿರುತ್ತದೆ.  ಶೀಘ್ರಲಿಪಿಗಾರ, ಆದೇಶ ಜಾರಿಕಾರ, ಬೆರಳಚ್ಚುಗಾರ ಮತ್ತು ಜವಾನ ಹುದ್ದೆ ಸೇರಿ ಒಟ್ಟು 133 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೀಘ್ರಲಿಪಿಗಾರ 17,  ಬೆರಳಚ್ಚುಗಾರರು – 24, ಆದೇಶ ಜಾರಿಕಾರ – 5, ಜವಾನ – 87  ಸೇರಿ ಒಟ್ಟು 133 ಹುದ್ದೆಗಳ. ಶೀಘ್ರಲಿಪಿಗಾರ ಹುದ್ದೆಗಳಿಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಆದೇಶ ಜಾರಿಕಾರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.ಜವಾನ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.ಶೀಘ್ರಲಿಪಿಗಾರ ರೂ.27,650/- ರಿಂದ 52,650/-ರೂ, ಬೆರಳಚ್ಚುಗಾರ ರೂ.21,400/- ರಿಂದ 42,000/-ರೂ, ಆದೇಶ ಜಾರಿಕಾರ ರೂ.19950/- ರಿಂದ 37900/-ರೂ,ಜವಾನ ರೂ.17000/- ರಿಂದ 28950/-ರೂ ಪ್ರತಿ ತಿಂಗಳು ನಿಗದಿ ಮಾಡಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಅಧಿಕೃತ ವೆಬ್‌ಸೈಟ್ https://districts.ecourts.gov.in/ccc-online-recruitment ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 21,2020 ರಿಂದ ಮೇ 20,2022ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top