ಬೆಂಗಳೂರು: ನಿವೃತ್ತ ಡಿಜಿ ಮತ್ತು ಐಜಿಪಿ ಶಂಕರ್ ಬಿದರಿ ಅವರನ್ನೂ ಬಿಡದ ಸೈಬರ್ ಕಳ್ಳರು, ಅಚರ ಬ್ಯಾಂಕ್ ಖಾತೆಯಿಂದ 89 ಸಾವಿರ ಕನ್ನ ಹಾಕಿರುವ ಘಟನೆ ನಡೆದಿದೆ.
ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆಮಾಡಿದ ವಂಚಕರು. ನಿವೃತ್ತ ಡಿಜಿ ಮತ್ತು ಐಜಿಪಿ ಶಂಕರ್ ಬಿದರಿಗೆ ಕಳ್ಳರು ವಂಚಿಸಿದ್ದಾರೆ. ನಿಮ್ಮ ಅಕೌಂಟ್ಗೆ ಪಾನ್ ಕಾರ್ಡ್ ಲಿಂಕ್ ಮಾಡಬೇಕು. ಲಿಂಕ್ ಮಾಡದಿದ್ದರೆ ಖಾತೆ ಬಂದಾಗುತ್ತದೆ ಎಂದು ಹೇಳಿ ಒಟಿಪಿ ಪಡೆದು ಅಕೌಂಟ್ನಲ್ಲಿದ್ದ 89 ಸಾವಿರ ರೂಪಾಯಿ ವಂಚನೆ ಮಾಡಿದ್ದಾರೆ. ಆಗ್ನೇಯ ವಿಭಾಗದ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ಶಂಕರ್ ಬಿದರಿ ದೂರು ನೀಡಿದ್ದಾರೆ. ಬಿದರಿ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸೈಬರ್ ಕಳ್ಳರು ಮೊಬೈಲ್ ಫೋನ್, ಇಂಟರ್ನೆಟ್ ಸೇರಿ ಹಲವು ರೀತಿಯಿಂದ ಜನರನ್ನು ವಂಚನೆ ಮಾಡಲಾಗುತ್ತಿದೆ. ನಕಲಿ ಫೇಸ್ಬುಕ್ ಖಾತೆಯಲ್ಲಿ ಹಣ ಕೇಳುವುದು, ಮೆಸೇಜ್ ಮೂಲಕ, ನಿಮಗೆ ಲಾಟರಿ ಬಂದಿದೆ, ನಿಮ್ಮ ಬ್ಯಾಂಕ್ ಖಾತೆ ಸಮಸ್ಯೆ ಆಗಿದೆ, ನಾವು ಇಂತಹ ಕಚೇರಿ ಸಿಬ್ಬಂದಿ ಅಂತಾ ಹೇಳಿ ವಂಚನೆ ನಡೆಸುತ್ತಿದ್ದಾರೆ.