ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಹೊಸ ವರ್ಷ , ಕ್ರಿಸ್‌ಮಸ್ ಸಂಭ್ರಮಕ್ಕೆ ಸಂಗ್ರಹಿಸಿದ್ದ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹೊಸ ವರ್ಷ ಹಾಗೂ ಕ್ರಿಸ್‌ಮಸ್ ಸಂಭ್ರಮಕ್ಕೆ ಸಂಗ್ರಹಿಸಿದ್ದ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ನೈಜೀರಿಯಾ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ‌ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಬಂಧಿತ ನೈಜೀರಿಯನ್ ಪ್ರಜೆ ಲಿಯೋನಾರ್ಡ್ ಓಕ್ವುಡಿಲಿ ಆರೋಪಿಯಾಗಿದ್ದು, ಈತನಿಂದ 21 ಕೋಟಿ ಮೌಲ್ಯದ 16 ಕೆ.ಜಿ ತೂಕದ ಎಂಡಿಎಂಎ ಕ್ರಿಸ್ಟಲ್, 500 ಗ್ರಾಂ ತೂಕದ ಕೊಕೇನ್, 1 ಮೊಬೈಲ್ ನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ತಂಡವು ರಾಮಮೂರ್ತಿನಗರದಲ್ಲಿ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಯನ್ನು ನಡೆಸಿ ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೀರಿಯನ್ ಪ್ರಜೆಯನ್ನು ಬಂಧಿಸಿ ವಿಚಾರಣೆ ಕೈಗೊಂಡು 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದರು.

ಆರೋಪಿಯು 1 ವರ್ಷದ ಹಿಂದೆ ವ್ಯಾಪಾರಿ ವೀಸಾ ಪಡೆದು ಭಾರತಕ್ಕೆ ಬಂದು, ರಾಮಮೂರ್ತಿನಗರದಲ್ಲಿ ಮನೆಯನ್ನು ಬಾಡಿಗೆಗೆ ಪಡೆದುಕೊಂಡು ವಾಸವಿರುತ್ತಾನೆ. 2024ರ ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಮಾದಕ ವ್ಯಸನಿಗಳಿಗೆ ಡ್ರಗ್ಸ್ ಮಾರಾಟಕ್ಕೆ ಯೋಜನೆ ಹಾಕಿಕೊಂಡಿದ್ದನು.ಆರೋಪಿಯು ಎಂಡಿಎಂಎ ಕ್ರಿಸ್ಟಲ್, ಕೊಕೇನ್ ಅನ್ನು ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡಲು ದೆಹಲಿ, ಮುಂಬೈ ಹಾಗೂ ಇತರೆ ರಾಜ್ಯಗಳಲ್ಲಿ ನೆಲೆಸಿರುವ ವಿದೇಶಿ ಮೂಲದ ವ್ಯಕ್ತಿಗಳಿಂದ ಚೂಡಿದಾರ್ ಬಟ್ಟೆಗಳಲ್ಲಿ, ಬೆಡ್‌ಶೀಟ್ ಕವರ್ ಗಳಲ್ಲಿ, ಸೋಪ್ ಬಾಕ್ಸ್ ಮತ್ತು ಚಾಕಲೇಟ್ ಬಾಕ್ಸ್‌ಗಳಲ್ಲಿ ನಿಷೇದಿತ ಮಾದಕ ವಸ್ತುಗಳನ್ನು ಅಡಗಿಸಿ ಯಾರಿಗೂ ಅನುಮಾನ ಬರದಂತೆ ಖರೀದಿ ಮಾಡಿಕೊಂಡು ಬಂದು ತನ್ನ ವಾಸದ ಮನೆಯಲ್ಲಿರಿಸಿಕೊಂಡಿದ್ದನು.

ಹೊಸ ವರ್ಷದ ಆಚರಣೆಯ ಸಮಯದಲ್ಲಿ ಹೆಚ್ಚಿನ ಬೆಲೆಗೆ ಬೆಂಗಳೂರು ನಗರದಲ್ಲಿ ನಡೆಯುವ ಪಾರ್ಟಿಗಳಿಗೆ, ಗ್ರಾಹಕರುಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದಿಸುವ ಉದ್ದೇಶದಿಂದ ಮಾದಕ ವಸ್ತುಗಳನ್ನು ಸಂಗ್ರಹಿಸಿ ಗೌಪ್ಯವಾಗಿ ಶೇಖರಿಸಿಕೊಂಡಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ. ಆರೋಪಿಯ ವಿರುದ್ದ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಮತ್ತು ವಿದೇಶಿ ಕಾಯ್ದೆಡಿ ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರೆಸಲಾಗಿದೆ‌ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *