Connect with us

Dvgsuddi Kannada | online news portal | Kannada news online

ಇಬ್ಬರು ರೈತರನ್ನು ಬಲಿ ಪಡೆದ ದುಬಾರಿ ಟೊಮ್ಯಾಟೊ..!

death

ದಾವಣಗೆರೆ

ಇಬ್ಬರು ರೈತರನ್ನು ಬಲಿ ಪಡೆದ ದುಬಾರಿ ಟೊಮ್ಯಾಟೊ..!

ಚಿಕ್ಕಬಳ್ಳಾಪುರ:  ಟೊಮ್ಯಾಟೊ ದರ ಒಂದು ರೀತಿ ಲಾಟ್ರಿ ಟಿಕೆಟ್ ಇದ್ಹಾಂಗೆ..! ಹೊಡದ್ರೆ ಜಾಕ್ ಪಾಟ್..! ಬಿದ್ದರೆ ಒಂದು ರೂಪಾಯಿಗೂ ಕೇಳೋರು ಇರಲ್ಲ. ಇದೀಗ ಟೊಮ್ಯಾಟೊಗೆ ಭಾರೀ ಬೇಡಿಕೆ ಬಂದಿದೆ.  ಇಂತಹ ದುಬಾರಿ ಟೊಮ್ಯಾಟೊ ಎರಡು ಜೀವ ಬಲಿ ಪಡೆದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಟೊಮ್ಯಾಟೊ ದುಬಾರಿ ಆಗಿದ್ದರಿಂದ  ತೋಟಕ್ಕೆ ರೈತ ಅಳವಡಿಸಿದ್ದ ವಿದ್ಯುತ್​ ಬೇಲಿಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಸಿಟ್ಟಿಗೆದ್ದ ಮೃತನ ಕುಟುಂಬಸ್ಥರು ತೋಟದ ಮಾಲೀಕನಿಗೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಇದರಿಂದರಿಂದ ಹೊಲದ ಮಾಲೀಕನೂ ಸಾವನ್ನಪ್ಪಿದ  ಘಟನೆ ಗೌರಿಬಿದನೂರು ತಾಲೂಕಿನ ಚಿರಕಮಟ್ಟೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಚಿರಕಮಟ್ಟೇನಹಳ್ಳಿ ಗ್ರಾಮದಲ್ಲಿ ಚಿಕ್ಕಹುಸೇನಪುರ ಗ್ರಾಮದ ರೈತ ಅಶ್ವತ್ಥರಾವ್​ ಟೊಮ್ಯಾಟೊ ಬೆಳೆದಿದ್ದಾರೆ. ಟೊಮ್ಯಾಟೊ ದರ ಹೆಚ್ಚಾಗಿದ್ದರಿಂದ ಬೆಳೆ ರಕ್ಷಣೆಗೆಂದು ವಿದ್ಯುತ್​ ಬೇಲಿ ಅಳವಡಿಸಿಕೊಂಡಿದ್ದರು. ಅದೇ ಗ್ರಾಮದ ಯುವ ರೈತ ವಸಂತರಾವ್(29) ಎಂಬುವರು ವಿದ್ಯುತ್​ ಬೇಲಿಯ ಅರಿವಿಲ್ಲದೆ ಆಕಸ್ಮಿಕವಾಗಿ ಟೊಮ್ಯಾಟೊ ತೋಟಕ್ಕೆ ಹೋಗಿದ್ದು, ಈ ವೇಳೆ ವಿದ್ಯುತ್​ ಪ್ರವಹಿಸಿ ಆತ ಸ್ಥಳದಲ್ಲೇ ಮೃತಪಟ್ಟಿದ್ಧಾನೆ.

ವಸಂತರಾವ್​ನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮೃತನ ಕುಟುಂಬಸ್ಥರು ಮತ್ತು ಸಂಬಂಧಿಕರು ರೊಚ್ಚಿಗೆದ್ದು ಇಂದು ಬೆಳಗ್ಗೆ ತೋಟದ ಮಾಲೀಕ ಅಶ್ವತ್ಥರಾವ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಅಶ್ವತ್ಥರಾವ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾವಾಗಿದೆ. ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top