Connect with us

Dvgsuddi Kannada | online news portal | Kannada news online

ಅಪ್ರಾಪ್ತ ಹುಡುಗರನ್ನು ಬಳಸಿಕೊಂಡು ಬೈಕ್​​ ಕಳ್ಳತನ ಮಾಡಿಸ್ತಿದ್ದ ಖತರ್ನಾಕ್ ಕಾನ್​ಸ್ಟೇಬಲ್​ ಅರೆಸ್ಟ್ …!

blr police

ಪ್ರಮುಖ ಸುದ್ದಿ

ಅಪ್ರಾಪ್ತ ಹುಡುಗರನ್ನು ಬಳಸಿಕೊಂಡು ಬೈಕ್​​ ಕಳ್ಳತನ ಮಾಡಿಸ್ತಿದ್ದ ಖತರ್ನಾಕ್ ಕಾನ್​ಸ್ಟೇಬಲ್​ ಅರೆಸ್ಟ್ …!

ಬೆಂಗಳೂರು: ಜನರಿಗೆ ರಕ್ಷಣೆ  ನೀಡಬೇಕಾದ ಪೊಲೀಸ್ ಕಾನ್ ಸ್ಟೇಬಲ್ ಒಬ್ಬ ಕಳ್ಳತನಕ್ಕೆ ಸಾಥ್​ ನೀಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡೆದಿದೆ. ಮಾಡಬಾರದ ತಪ್ಪು ಮಾಡಿ ಈಗ ಪೊಲೀಸರೇ ಅತಿಥಿಯಾಗಿದ್ದಾನೆ.  ಈ ಘಟನೆ ಇಡೀ ಪೊಲೀಸ್​ ಇಲಾಖೆ ತಲೆತಗ್ಗಿಸುವಂತಾಗಿದೆ.

ಅಪ್ರಾಪ್ತರನ್ನು ಬಳಸಿಕೊಂಡು ಬೈಕ್​​ಗಳನ್ನು ಕಳ್ಳತನ ಮಾಡಿಸ್ತಿದ್ದ ಕಾನ್​ಸ್ಟೇಬಲ್​ನನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತನ್ನು ಹೊನ್ನಪ್ಪ ಅಲಿಯಾಸ್​ ರವಿ ಎಂದು ಗುರುತಿಸಲಾಗಿದೆ. 2016ರ ಬ್ಯಾಚ್​ನ ಸಿವಿಲ್ ಕಾನ್ಸ್​ಟೇಬಲ್ ಆಗಿರುವ ಹೊನ್ನಪ್ಪ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಸದ್ಯ ಒಒಡಿ ಮೇಲೆ ಐಪಿಎಸ್ ಅಧಿಕಾರಿಯೊಬ್ಬರ ಪರ್ಸನಲ್ ಕಾರು ಡ್ರೈವರ್ ಆಗಿದ್ದ. ಹೊನ್ನಪ್ಪ ಜತೆಗೆ ರಾಜಸ್ಥಾನದ ರಮೇಶ್ ಹಾಗೂ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರ ಬಂಧಿಸಲಾಗಿದೆ.

ಓಎಲ್ ಎಕ್ಸ್​ನಲ್ಲಿ ಯಾವ ಗಾಡಿಗೆ ಬೇಡಿಕೆ ಇದೆ ಅಂತಹ ಗಾಡಿಯನ್ನೇ ಹುಡುಕಿ ಕಳ್ಳತನ ಮಾಡಿಸುತ್ತಿದ್ದ. ಅಪ್ರಾಪ್ತರು ಬೈಕ್ ಕಳ್ಳತನ ಮಾಡಿ ಹೊನ್ನಪ್ಪನಿಗೆ ತಂದು ಕೊಡ್ತಿದ್ದರು.  ಬಳಿಕ ಬೈಕ್ ಮಾರಾಟ ಮಾಡಿ ಐದರಿಂದ ಆರು ಸಾವಿರ ರೂ. ಹಣವನ್ನು ಹುಡುಗರಿಗೆ ನೀಡ್ತಿದ್ದ. ಬೆಂಗಳೂರು ಹೊರವಲಯ, ಹಾವೇರಿಯ ರಾಣಿಬೆನ್ನೂರು ಸೇರಿದಂತೆ ಅನೇಕ ಕಡೆ ಬೈಕ್​ಗಳ ಕಳ್ಳತನ ಮಾಡಿಸಿದ್ದಾನೆ. ತಪಾಸಣೆ ವೇಳೆ ಪೊಲೀಸರು ಗಾಡಿ ಹಿಡಿದಾಗ ಅವರಿಗೆ ಕರೆ ಮಾಡಿ ನಾನು ಪೊಲೀಸ್ ನಮ್ಮ ಕಡೆಯವರು ಬಿಡಿ ಅಂತ ಬಿಡಿಸುತ್ತಿದ್ದ. ಇದೀಗ ಪೊಲೀಸರ ಕೈಗೆ ಹೊನ್ನಪ್ಪ ಸಿಕ್ಕಿಬಿದ್ದಿದ್ದು, ವಾರೆಂಟ್ ಮೇಲೆ ವಶಕ್ಕೆ ಪಡೆದು ಮಾಗಡಿ ರಸ್ತೆ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ. ಇವರಿಂದ ಇದುವರೆ  ಮಾರಾಟವಾದ 53 ಬೈಕ್​ಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top