Connect with us

Dvgsuddi Kannada | online news portal | Kannada news online

ಅಪ್ರಾಪ್ತ ಹುಡುಗರನ್ನು ಬಳಸಿಕೊಂಡು ಬೈಕ್​​ ಕಳ್ಳತನ ಮಾಡಿಸ್ತಿದ್ದ ಖತರ್ನಾಕ್ ಕಾನ್​ಸ್ಟೇಬಲ್​ ಅರೆಸ್ಟ್ …!

blr police

ಪ್ರಮುಖ ಸುದ್ದಿ

ಅಪ್ರಾಪ್ತ ಹುಡುಗರನ್ನು ಬಳಸಿಕೊಂಡು ಬೈಕ್​​ ಕಳ್ಳತನ ಮಾಡಿಸ್ತಿದ್ದ ಖತರ್ನಾಕ್ ಕಾನ್​ಸ್ಟೇಬಲ್​ ಅರೆಸ್ಟ್ …!

ಬೆಂಗಳೂರು: ಜನರಿಗೆ ರಕ್ಷಣೆ  ನೀಡಬೇಕಾದ ಪೊಲೀಸ್ ಕಾನ್ ಸ್ಟೇಬಲ್ ಒಬ್ಬ ಕಳ್ಳತನಕ್ಕೆ ಸಾಥ್​ ನೀಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡೆದಿದೆ. ಮಾಡಬಾರದ ತಪ್ಪು ಮಾಡಿ ಈಗ ಪೊಲೀಸರೇ ಅತಿಥಿಯಾಗಿದ್ದಾನೆ.  ಈ ಘಟನೆ ಇಡೀ ಪೊಲೀಸ್​ ಇಲಾಖೆ ತಲೆತಗ್ಗಿಸುವಂತಾಗಿದೆ.

ಅಪ್ರಾಪ್ತರನ್ನು ಬಳಸಿಕೊಂಡು ಬೈಕ್​​ಗಳನ್ನು ಕಳ್ಳತನ ಮಾಡಿಸ್ತಿದ್ದ ಕಾನ್​ಸ್ಟೇಬಲ್​ನನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತನ್ನು ಹೊನ್ನಪ್ಪ ಅಲಿಯಾಸ್​ ರವಿ ಎಂದು ಗುರುತಿಸಲಾಗಿದೆ. 2016ರ ಬ್ಯಾಚ್​ನ ಸಿವಿಲ್ ಕಾನ್ಸ್​ಟೇಬಲ್ ಆಗಿರುವ ಹೊನ್ನಪ್ಪ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಸದ್ಯ ಒಒಡಿ ಮೇಲೆ ಐಪಿಎಸ್ ಅಧಿಕಾರಿಯೊಬ್ಬರ ಪರ್ಸನಲ್ ಕಾರು ಡ್ರೈವರ್ ಆಗಿದ್ದ. ಹೊನ್ನಪ್ಪ ಜತೆಗೆ ರಾಜಸ್ಥಾನದ ರಮೇಶ್ ಹಾಗೂ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರ ಬಂಧಿಸಲಾಗಿದೆ.

ಓಎಲ್ ಎಕ್ಸ್​ನಲ್ಲಿ ಯಾವ ಗಾಡಿಗೆ ಬೇಡಿಕೆ ಇದೆ ಅಂತಹ ಗಾಡಿಯನ್ನೇ ಹುಡುಕಿ ಕಳ್ಳತನ ಮಾಡಿಸುತ್ತಿದ್ದ. ಅಪ್ರಾಪ್ತರು ಬೈಕ್ ಕಳ್ಳತನ ಮಾಡಿ ಹೊನ್ನಪ್ಪನಿಗೆ ತಂದು ಕೊಡ್ತಿದ್ದರು.  ಬಳಿಕ ಬೈಕ್ ಮಾರಾಟ ಮಾಡಿ ಐದರಿಂದ ಆರು ಸಾವಿರ ರೂ. ಹಣವನ್ನು ಹುಡುಗರಿಗೆ ನೀಡ್ತಿದ್ದ. ಬೆಂಗಳೂರು ಹೊರವಲಯ, ಹಾವೇರಿಯ ರಾಣಿಬೆನ್ನೂರು ಸೇರಿದಂತೆ ಅನೇಕ ಕಡೆ ಬೈಕ್​ಗಳ ಕಳ್ಳತನ ಮಾಡಿಸಿದ್ದಾನೆ. ತಪಾಸಣೆ ವೇಳೆ ಪೊಲೀಸರು ಗಾಡಿ ಹಿಡಿದಾಗ ಅವರಿಗೆ ಕರೆ ಮಾಡಿ ನಾನು ಪೊಲೀಸ್ ನಮ್ಮ ಕಡೆಯವರು ಬಿಡಿ ಅಂತ ಬಿಡಿಸುತ್ತಿದ್ದ. ಇದೀಗ ಪೊಲೀಸರ ಕೈಗೆ ಹೊನ್ನಪ್ಪ ಸಿಕ್ಕಿಬಿದ್ದಿದ್ದು, ವಾರೆಂಟ್ ಮೇಲೆ ವಶಕ್ಕೆ ಪಡೆದು ಮಾಗಡಿ ರಸ್ತೆ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ. ಇವರಿಂದ ಇದುವರೆ  ಮಾರಾಟವಾದ 53 ಬೈಕ್​ಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 30 ಜೂನ್ 2025

    By

    ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ, ಚಿನ್ನದ ತಟ್ಟೆಯಲ್ಲಿ ಊಟ ಮಾಡುವ ಏಕೈಕ ರಾಶಿ ಎಂದರೆ ಇವರು,...

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top