Connect with us

Dvgsuddi Kannada | online news portal | Kannada news online

ಇನ್ಮುಂದೆ ಧಾರ್ಮಿಕ ಆಚರಣೆಗೆ ನಿರ್ಬಂಧವಿಲ್ಲ: ರಾಜ್ಯ ಸರ್ಕಾರ ಆದೇಶ

ಪ್ರಮುಖ ಸುದ್ದಿ

ಇನ್ಮುಂದೆ ಧಾರ್ಮಿಕ ಆಚರಣೆಗೆ ನಿರ್ಬಂಧವಿಲ್ಲ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವಿವಿಧ ಧಾರ್ಮಿಕ ಆಚರಣೆಗಳಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ, ಇದೀಗ ಆದೇಶ ತೆರವುಗೊಳಿಸಿದೆ.

ಭಕ್ತರ ಮನವಿ ಮೇರೆಗೆ ನಿರ್ದಿಷ್ಟ ಷರತ್ತಿಗೆ ಒಳಪಟ್ಟು ದೈನಂದಿನ ಪೂಜಾ ಕಾರ್ಯಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಧಾರ್ಮಿಕ ಉತ್ಸವಗಳಿಗೆ ಮಾತ್ರ ನಿರ್ಬಂಧ ಮುಂದುವರೆದಿತ್ತು.ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಕಾರಣ ಆರೋಗ್ಯ ಇಲಾಖೆಯ ಅಭಿಪ್ರಾಯವನ್ನು ಪಡೆದು ಧಾರ್ಮಿಕ ಉತ್ಸವಗಳಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ತೆರವುಗೊಳಿಸಿದೆ.

ಧಾರ್ಮಿಕ ದತ್ತಿ ಇಲಾಖೆ ಮಂಗಳವಾರದಂದು ಈ ಕುರಿತು ಸುತ್ತೋಲೆ ಹೊರಡಿಸಿದ್ದು ತಕ್ಷಣದಿಂದಲೇ ಜಾರಿಗೆ ಬರಲಿದೆ.ಇದರಿಂದ ಧಾರ್ಮಿಕ ಸೇವೆ, ಜಾತ್ರಾ ಮಹೋತ್ಸವ, ಬ್ರಹ್ಮ ರಥೋತ್ಸವ, ಅನ್ನ ದಾಸೋಹ ಪ್ರಸಾದ ವಿತರಣೆ, ಪವಿತ್ರೋತ್ಸವ ಸೇರಿದಂತೆ ಧಾರ್ಮಿಕ ಕಾರ್ಯಗಳನ್ನು ಮೊದಲಿನಂತೆ ನೆರವೇರಿಸಬಹುದಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top