ಆಶ್ರಯ ಯೋಜನೆಯಡಿ ಮೆನೆ ಪಡೆಯಲು ವರಮಾನ ಮಿತಿ ಹೆಚ್ಚಳ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯ ಸರಕಾರದಿಂದ ಆಶ್ರಯ ಯೋಜನೆಯಡಿ ವಸತಿ ಫಲಾನುಭವಿಗಳ ಆಯ್ಕೆಗೆ ಇರುವ ವಾರ್ಷಿಕ ವರಮಾನ ಮಿತಿಯನ್ನು 1.20 ಲಕ್ಷ ರೂ ಗೆ ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿರ್ದೇಶಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಮಾನ ಮಿತಿ ಹೆಚ್ಚಳ ಮಾಡುವಂತೆ ಬಡವರು ಮನವಿ ಸಲ್ಲಿಸುತ್ತಾ ಬಂದಿದ್ದರು. ಇದೀಗ ಮುಖ್ಯಮಂತ್ರಿ ಅವರು  ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ  ಎಂದರು.

ಕೇಂದ್ರ ಸರಕಾರವು ಬಿಪಿಎಲ್ ಕಾರ್ಡುದಾರರ ವರಮಾನ ಮಿತಿಯನ್ನು ರೂಪಾಯಿ 1.20 ಲಕ್ಷಕ್ಕೆ ಈಗಾಗಲೇ ಹೆಚ್ಚಿಸಿದೆ, ಆದರೆ ರಾಜ್ಯದಲ್ಲಿ, ಆಶ್ರಯ ಯೋಜನೆ ಫಾನುಭವಿಗಳಿಗೆ ವರಮಾನ ಮಿತಿ ರೂಪಾಯಿ 32000 ದಷ್ಟಿದ್ದು, ಹೆಚ್ಚಿನ ಅರ್ಹರು ಯೋಜನೆಯ ಲಾಭ ಪಡೆಯುವುದರಿಂದ ವಂಚಿತರಾಗುತ್ತಿದ್ದರು. ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು, ಸರಕಾರದ ಮುಖ್ಯ ಕಾರ್ಯದರ್ಶಗಳಿಗೆ ಹಾಗೂ ವಸತಿ ಖಾತೆಯ ಕಾರ್ಯದರ್ಶಿಗಳಿಗೆ, ಸೂಕ್ತ ನಿರ್ದೇಶನ ನೀಡಿದರು ಎಂದು ಸಚಿವರು ತಿಳಿಸಿದರು. ಈ ನಿರ್ಧಾರದಿಂದ ಲಕ್ಷಾಂತರ ಮಂದಿ ವಸತಿ ವಂಚಿತ ಬಡವರು ಪ್ರಯೋಜನ ಪಡೆಯಲಿದ್ದಾರೆ ಎಂದು ತಿಳಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *