ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆಯಾಗಿ ತುಟ್ಟಿಭತ್ಯೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮನವಿ ಮಾಡಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ.3 ರಷ್ಟು ಮಂಜೂರು ಮಾಡಿದೆ. ಜನವರಿಯಿಂದ ಪೂರ್ವಾನ್ವಯವಾಗಿ ಕರ್ನಾಟಕ ಸರ್ಕಾರವೂ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡುವುದು ಸಂಪ್ರದಾಯ. ಹೀಗಾಗಿ 2022ರ ಜ.1ರಿಂದ ಪೂರ್ವಾನ್ವ ಆಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ ಈ ವರ್ಷದ ಶೇ. 3 ತುಟ್ಟಿಭತ್ಯೆ ಬಿಡುಗಡೆಗೊಳಿಸಿ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿಯವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಪತ್ರಮುಖೇನ ಮನವಿ ಮಾಡಿಕೊಂಡಿದ್ದಾರೆ.



