Connect with us

Dvgsuddi Kannada | online news portal | Kannada news online

ಹಿಜಾಬ್​ ವಿವಾದ : ಅಲ್ಲಾಹು ಅಕ್ಬರ್ ಎಂದು ಕೂಗಿದ ವಿದ್ಯಾರ್ಥಿಗೆ ಉಗ್ರ ಸಂಘಟನೆ ಅಲ್ ಖೈದಾ ಶಹಬ್ಬಾಸ್ ಗಿರಿ…! 

ಪ್ರಮುಖ ಸುದ್ದಿ

ಹಿಜಾಬ್​ ವಿವಾದ : ಅಲ್ಲಾಹು ಅಕ್ಬರ್ ಎಂದು ಕೂಗಿದ ವಿದ್ಯಾರ್ಥಿಗೆ ಉಗ್ರ ಸಂಘಟನೆ ಅಲ್ ಖೈದಾ ಶಹಬ್ಬಾಸ್ ಗಿರಿ…! 

ಬೆಂಗಳೂರು: ಹಿಜಾಬ್​ ವಿವಾದದಲ್ಲಿ  ‘ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್ ಎಂದು ಕೂಗಿದ   ಮಂಡ್ಯದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್​ ಗೆ  ಉಗ್ರ ಸಂಘಟನೆ ಅಲ್​ಖೈದಾ  ಶಹಬ್ಬಾಸ್ ಗಿರಿ ನೀಡಿದದೆ.

ಅಲ್​ಖೈದಾ ಮುಖ್ಯಸ್ಥ ಆಲ್​ ಜವಾಹಿರಿ ಈ ಬಗ್ಗೆ 9 ನಿಮಿಷದ ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದು, ಮುಸ್ಕಾನ್​ ಭಾರತದ ಉದಾತ್ತ ಮಹಿಳೆ. ಅವಳ ಹೋರಾಟ ನನಗೆ ಸಂತಸ ತಂದಿದೆ. ಹಿಜಾಬ್  ದಬ್ಬಾಳಿಕೆ ವಿರುದ್ಧ ಭಾರತದ ಮುಸ್ಲಿಮರು ತಿರುಗಿ ಬೀಳಬೇಕು. ಮುಸ್ಕಾನ್​  ಹೋರಾಟ ನನಗೆ ಸಂತಸ ತಂದಿದೆ.  ಹಿಜಾಬ್​ ಹಾಕುವುದು ನಮ್ಮ ಧರ್ಮದ ಹಕ್ಕು ಎಂದು  ಬಣ್ಣಿಸಿ ಒಂದು ಪದ್ಯ ಬರೆಯುತ್ತೇನೆ ಎಂದು ಹೇಳಿಕೊಂಡಿದ್ದಾನೆ.

ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಪ್ರತಿಯಾಗಿ ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದ್ದಳು. ಈ ಬಗ್ಗೆ ಮಾತನಾಡಿದ  ಗೃಹ ಸಚಿವ ಅರಗ ಜ್ಞಾನೇಂದ್ರ, ಹಿಜಾಬ್​ ವಿವಾದದ ಹಿಂದೆ ಉಗ್ರರ ಕೈವಾಡ ಇದೆ. ಈ ಬಗ್ಗೆ ನಾನು ಹಿಂದೆಯೇ ಹೇಳಿದ್ದೆ,  ಹಿಜಾಬ್ ವಿವಾದದ ಹಿಂದೆ ಅಂತಾರಾಷ್ಟ್ರೀಯ ಸಂಚು ಇದೆ ಎಂದಿದ್ದಾರೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top