ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗ ರಚನೆಗೆ ಸಮಿತಿಯನ್ನು ಈಗಾಗಲೇ ಸರ್ಕಾರ ಪ್ರಕಟಿಸಿದೆ. ಸಮಿತಿ ರಚಿಸಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್ ಯಡಿಯೂರಪ್ಪನವರಿಗೆ ಸರ್ಕಾರಿ ನೌಕರರ ಸಂಘದಿಂದ ಧನ್ಯವಾದ ಸಲ್ಲಿಸುತ್ತೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರವು ಪ್ರತಿವರ್ಷ ಐದು ವರ್ಷಗಳಿಗೊಮ್ಮೆ ವೇತನ ಆಯೋಗ ರಚಿಸುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ನಾಲ್ಕು ವರ್ಷ ಏಳು ತಿಂಗಳಿಗೆ ವೇತನ ಆಯೋಗ ರಚಿಸಿ ವರದಿ ನೀಡಲು ಸರ್ಕಾರ ಆಯೋಗಕ್ಕೆ ಆರು ತಿಂಗಳ ಗಡುವು ನೀಡಿದೆ. ಈ ಆಯೋಗವು ಆರು ತಿಂಗಳ ಒಳಗಾಗಿ ವೇತನ ಆಯೋಗದ ಬೇಡಿಕೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ವಿಶ್ವಾಸವಿದೆ ಎಂದರು.
ಏಳನೇ ವೇತನ ಆಯೋಗ ರಚನೆಯಿಂದ 11 ಲಕ್ಷ ನೌಕರರಿಗೆ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ನೌಕರರು ಸರ್ಕಾರಿ ಶಾಲೆಗಳ ದತ್ತು, ಗಡಿ ಶಾಲೆಗಳ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.



