ಬೆಂಗಳೂರು: ಕರ್ನಾಟಕ ರಾಜ್ಯ ಕುಸ್ತಿ ಫೆಡರೇಷನ್ ನೂತನ ಅಧ್ಯಕ್ಚರಾಗಿ ಬೆಳ್ಳಿಪಾಡಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ಮೇಲುಸ್ತುವಾರಿಯಲ್ಲಿ ನಡೆದ ಚುನಾವಣೆಯಲ್ಲಿ ನೂತನ ಸಮಿತಿಯನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗುಣರಂಜನ್ ಶೆಟ್ಟಿ ಅವರನ್ನು ಭಾರತೀಯ ಕುಸ್ತಿ ಸಂಘದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಭಿನಂದಿಸಿದರು.
ಈ ಸಮಿತಿಯು 21 ದಿನಗಳ ಕಾಲ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿದೆ. 2022-26 ವರೆಗೆ ಈ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಸಮಿತಿಯ ಮೇಲುಸ್ತುವಾರಿ ಬಿ.ಎಸ್ ಪ್ರಸೂದ್ ಹೇಳಿದ್ದಾರೆ.
ನೂತನ ಅಧ್ಯಕ್ಷ ಬೆಳ್ಳಿಪಾಡಿ ಗುಣರಂಜನ್ ಶೆಟ್ಟಿ ಮಾತನಾಡಿ, ನಮ್ಮ ರಾಜ್ಯದ ಕುಸ್ತಿ ಸ್ಪರ್ಧಾ ಕ್ಷೇತ್ರವನ್ನು ಅಭಿವೃದ್ದಿಗೊಳಿಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಇದನ್ನು ನನ್ನ ನೇತೃತ್ವದ ತಂಡ ಸಮರ್ಥವಾಗಿ ನಿಭಾಯಿಸಲಿದೆ’ ಎಂದು ಹೇಳಿದರು.
ಹರಿಹರದಲ್ಲಿ ಸೀನಿಯರ್ ಕುಸ್ತಿ ಚಾಂಪಿಯನ್ಶಿಪ್ ಟ್ರಯಲ್ಸ್: ಡಿಸೆಂಬರ್ 21 ರಿಂದ 25 ರ ವರೆಗೆ ಆಂಧ್ರ ಪ್ರದೇಶದ ವೈಜಾಗ್ನಲ್ಲಿ ಸೀನಿಯರ್ಸ್ ಕುಸ್ತಿ ಚಾಂಪಿಯನ್ಶಿಪ್ ಸ್ಪರ್ಧೆ ಆಯೋಜಿಸಲಾಗಿದೆ. ಇದಕ್ಕೆ ನಮ್ಮ ರಾಜ್ಯದ ಕುಸ್ತಿಪಟುಗಳ ಆಯ್ಕೆಗಾಗಿ ಡಿಸೆಂಬರ್ 10 ರಂದು ಹರಿಹರದಲ್ಲಿ ಸೀನಿಯರ್ ಕುಸ್ತಿ ಚಾಂಪಿಯನ್ಶಿಪ್ ಟ್ರಯಲ್ಸ್ ಆಯೋಜಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ.



