ಶೀಘ್ರದಲ್ಲಿ ರಾಜ್ಯದಾದ್ಯಂತ ಏಕ ರೀತಿಯ ಆಸ್ತಿ ತೆರಿಗೆ ವ್ಯವಸ್ಥೆ ಜಾರಿ; ಪೌರಾಡಳಿತ ಸಚಿವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರಪಾಲಿಕೆಯ ಮಾದರಿಯಲ್ಲಿ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡಿಸಿ, ರಾಜ್ಯದಾದ್ಯಂತ ಏಕರೀತಿಯ ಕರವಸೂಲಾತಿಗೆ ಹೊಸ ಕಾಯ್ದೆಯೊಂದನ್ನು ಮುಂದಿನ ಒಂದು ತಿಂಗಳೊಳಗಾಗಿ ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಖಾತೆ ಸಚಿವ ರಹೀಂಖಾನ್ ಅವರು ಹೇಳಿದರು.

  • ರಾಜ್ಯದಾದ್ಯಂತ ಏಕರೀತಿಯ ಕರವಸೂಲಾತಿಗೆ ಹೊಸ ಕಾಯ್ದೆ ಜಾರಿ
  • ಮುಂದಿನ ಒಂದು ತಿಂಗಳೊಳಗಾಗಿ ಜಾರಿ
  • ಬೆಂಗಳೂರು ಮಹಾನಗರಪಾಲಿಕೆಯ ಮಾದರಿಯಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆ ಗಳ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡನೆ

ಶಿವಮೊಗ್ಗ ಮಹಾನಗರಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದ ಬಹುತೇಕ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಇತ್ತೀಚಿನ ಕೆಲವು ದಶಕಗಳಿಂದ ನಿರ್ಮಾಣಗೊಂಡಿರುವ ಬಡಾವಣೆಗಳಲ್ಲಿ ಅಧಿಕೃತವಾಗಿ ಹಾಗೂ ಇನ್ನೂ ಕೆಲವು ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳಿಗೆ ಸಂದಾಯವಾಗಬೇಕಾದ ಭಾರೀ ಪ್ರಮಾಣದ ಕರ ವಸೂಲಾಗದೇ ಬಾಕಿ ಉಳಿಯುತ್ತಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಾಗಿದೆ.

ಜಿಲ್ಲೆಯ ಮಹಾನಗರಪಾಲಿಕೆಯಲ್ಲಿ ಕೊರತೆಯಿರುವ ಹುದ್ದೆಗಳಲ್ಲಿ ಕೆಲವು ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಅಲ್ಲದೇ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ 38ಪೌರಕಾರ್ಮಿಕರ ನೇರನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸುವಂತೆ ಅವರು ಸಂಬಂಧಿಸಿದ ಮುಖ್ಯಾಧಿಕಾರಿಗಳಿಗೆ ಸೂಚಲಾಗಿದೆ ಎಂದರು.

ಕರವಸೂಲಾತಿಗೆ ಸಂಬಂಧಿಸಿದಂತೆ ಸಿಬ್ಬಂದಿಗಳ ಕೊರತೆ ಇರುವ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸ್ವಯ ಸಹಾಯ ಗುಂಪುಗಳ ಪ್ರತಿನಿಧಿಗಳ ನೆರವನ್ನು ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.ನಗರ ಮತ್ತು ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಆಯಕಟ್ಟಿನ ಸ್ಥಳಗಳಲ್ಲಿ ಸ್ಥಳೀಯ ಸಂಸ್ಥೆಗೆ ಸಂಬಂಧಿಸಿದ ವಿಶಾಲವಾದ ಸ್ವತ್ತುಗಳಿದ್ದು, ವಾಣಿಜ್ಯ ಸಂಕೀರ್ಣ ನಿರ್ಮಿಸಿ, ನಿರ್ವಹಿಸಲು ಉತ್ಸುಕರಿದ್ದು, ಕ್ರಿಯಾಯೋಜನೆ ತಯಾರಿಸಿ, ಪ್ರಸ್ತಾವನೆ ಸಲ್ಲಿಸಿದಲ್ಲಿ ಸರ್ಕಾರದಿಂದ ಅಗತ್ಯ ಹಣಕಾಸಿನ ನೆರವನ್ನು ಒದಗಿಸಲಾಗುವುದು ಎಂದರು.

ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಉದ್ಧೇಶಿತ ಯೋಜನೆಗಳಿಗೆ ಬಳಸಿಕೊಂಡು ಗುಣಮಟ್ಟದ ಕಾಮಗಾರಿಗಳನ್ನು ನಿಗಧಿತ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಅನುದಾನ ಸರ್ಕಾರಕ್ಕೆ ಹಿಂದಿರುಗಿ ಹೋಗುವ ಸಾಧ್ಯತೆ ಇದೆ ಎಂದವರು ನುಡಿದರು.
ಘನತ್ಯಾಜ್ಯ ವಸ್ತುಗಳ ನಿರ್ವಹಣೆ ಹಾಗೂ ಘಟಕಗಳ ನಿರ್ಮಾಣಕ್ಕೆ ಬಿಡುಗಡೆಯಾಗಿರುವ ಅನುದಾನವನ್ನು ಸಕಾಲದಲ್ಲಿ ಬಳಸುವಂತೆ ಕಳೆದ ಆರು ತಿಂಗಳ ಹಿಂದೆಯೇ ಸೂಚನೆ ನೀಡಲಾಗಿದೆ. ಆದಾಗ್ಯೂ ಅನುದಾನ ಬಳಸದೇ ಬಾಕಿ ಉಳಿಸಿಕೊಂಡಿರುವುದು ಸರಿಯಲ್ಲ. ಕೂಡಲೇ ಹಣ ಬಳಕೆ ಮಾಡಿ ವರದಿ ನೀಡುವಂತೆ ಸಚಿವರು ಸೂಚಿಸಿದರು.

ನಗರ ಮತ್ತು ಪಟ್ಟಣ ಪ್ರದೇಶದಲ್ಲಿನ ಎಲ್ಲಾ ಶಾಲೆಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *