ಬೆಂಗಳೂರು: ರಾಜ್ಯದ ಶಾಲೆಗಳ ಮಧ್ಯಾಹ್ನ ಬಿಸಿಯೂಟ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕರ 2020ರ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗಿನ ಮೂರು ತಿಂಗಳ ಗೌರವ ಸಂಭಾವನೆ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಜನವರಿ 01ರಿಂದ ಆದೇಶ ಹೊರಡಿಸಲಾಗಿದ್ದು, ಮೂರು ತಿಂಗಳ ಗೌರವ ಸಂಭಾವನೆ ಪಾವತಿಗೆ 9345.76 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂರು ತಿಂಗಳ ವೇತನವನ್ನು ಕೂಡಲೇ ಅಡುಗೆ ಸಹಾಯಕರಿಗೆ ನೀಡಲಾಗುವುದು ಹಾಗೂ 2021ರ ಜನವರಿಯಿಂದ ಮಾರ್ಚ್ ವರೆಗಿನ ತ್ರೈಮಾಸಿಕದ ಗೌರವ ಸಂಭಾವನೆಯನ್ನು ಶೀಘ್ರವೇ ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ತಿಳಿಸಿದ್ದಾರೆ.