Connect with us

Dvgsuddi Kannada | online news portal | Kannada news online

ಶಾಲೆಯ ಅಡುಗೆ ಸಹಾಯಕರ ಮೂರು ತಿಂಗಳ ಗೌರವ ಧನ ಬಿಡುಗಡೆ

ಪ್ರಮುಖ ಸುದ್ದಿ

ಶಾಲೆಯ ಅಡುಗೆ ಸಹಾಯಕರ ಮೂರು ತಿಂಗಳ ಗೌರವ ಧನ ಬಿಡುಗಡೆ

ಬೆಂಗಳೂರು: ರಾಜ್ಯದ ಶಾಲೆಗಳ ಮಧ್ಯಾಹ್ನ ಬಿಸಿಯೂಟ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕರ 2020ರ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗಿನ ಮೂರು ತಿಂಗಳ ಗೌರವ ಸಂಭಾವನೆ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಜನವರಿ 01ರಿಂದ  ಆದೇಶ ಹೊರಡಿಸಲಾಗಿದ್ದು, ಮೂರು ತಿಂಗಳ ಗೌರವ ಸಂಭಾವನೆ ಪಾವತಿಗೆ 9345.76 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂರು ತಿಂಗಳ ವೇತನವನ್ನು ಕೂಡಲೇ ಅಡುಗೆ ಸಹಾಯಕರಿಗೆ ನೀಡಲಾಗುವುದು ಹಾಗೂ 2021ರ ಜನವರಿಯಿಂದ ಮಾರ್ಚ್ ವರೆಗಿನ ತ್ರೈಮಾಸಿಕದ ಗೌರವ ಸಂಭಾವನೆಯನ್ನು ಶೀಘ್ರವೇ ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top