Connect with us

Dvgsuddi Kannada | online news portal | Kannada news online

ದಾವಣಗೆರೆ: ಎಬಿವಿಪಿಯಿಂದ ಕೊರೊನಾ ಲಸಿಕೆ ಜಾಗೃತಿ  

ಪ್ರಮುಖ ಸುದ್ದಿ

ದಾವಣಗೆರೆ: ಎಬಿವಿಪಿಯಿಂದ ಕೊರೊನಾ ಲಸಿಕೆ ಜಾಗೃತಿ  

ದಾವಣಗೆರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ನಗರದ ವಿವಿಧ ಭಾಗದಲ್ಲಿ  ಭಾರತವೇ ಅಭಿವೃದ್ಧಿಪಡಿಸಿರುವ ಕೊರೊನಾ ಕೋವಿಶೀಲ್ಡ್  ಲಸಿಕೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ದೇಶದಾದ್ಯಂತ  ಇಂದು ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು,  ದಾವಣಗೆರೆಯಲ್ಲಿಯೂ ಕೂಡ 7 ಕಡೆ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಜನ ಜಾಗೃತಿ ಮೂಡಿಸುವ ಸಲುವಾಗಿ ಎಬಿವಿಪಿ ನಗರದ  ವಿವಿಧ ಕಾಲೇಜ್, ಪೊಲೀಸ್ ಠಾಣೆ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿ ಜಾಗೃತಿ ಮೂಡಿಸಲಾಯಿತು.

abvp corona vacinne 2

ನಗರದ ವಿವಿಧ ಭಾಗದಲ್ಲಿ  #ITrustMyVaccine, #TrustYourVaccine ಎಂಬ ಪೋಸ್ಟರ್ ಬಿಡುಗಡೆ ಮಾಡಿ ಜನರಲ್ಲಿ‌ ವಿಶ್ವಾಸ ಮೂಡಿಸುವ ಪ್ರಯತ್ನ ನಡೆಸಲಾಯಿತು.ಈ ಸಂದರ್ಭದಲ್ಲಿ ದಾವಣಗೆರೆ ಮಹಾನಗರ ಎಬಿವಿಪಿ ಅಧ್ಯಕ್ಷ ಪವನ್ ರೇವಣಕರ್, ರಾಜ್ಯ ಕಾರ್ಯಕಾರಿ ಸದಸ್ಯ ಶರತ್ , ನಗರ ಕಾರ್ಯದರ್ಶಿ ಭಾರ್ಗವ , ಹಾಸ್ಟೆಲ್ ಪ್ರಮುಖ ರವಿ, ನಗರ ವಿದ್ಯಾರ್ಥಿನಿ ಪ್ರಮುಖ್ ಮಾನಸ, ಲಕ್ಷ್ಮಿ ,ಹೋರಾಟ ಪ್ರಮುಖ ವಿಜಯ, ಜಿಲ್ಲಾ ಮಾಧ್ಯಮ ಪ್ರಮುಖ್ ಆಕಾಶ್ ಇಟಗಿ ಹಾಗೂ ನಗರ ಕಾರ್ಯಕರ್ತರು ಉಪಸ್ಥಿತರಿದ್ದರು.

abvp corona vacinne 3

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top