Connect with us

Dvgsuddi Kannada | online news portal | Kannada news online

ದಾವಣಗೆರೆ ನಿವಾಸಿಗಳ ಭೀಕರ ಅಪಘಾತ; ಸಮಗ್ರ ವರದಿ ಕೇಳಿದ ಸುಪ್ರೀಂ ಕೋರ್ಟ್

ದಾವಣಗೆರೆ

ದಾವಣಗೆರೆ ನಿವಾಸಿಗಳ ಭೀಕರ ಅಪಘಾತ; ಸಮಗ್ರ ವರದಿ ಕೇಳಿದ ಸುಪ್ರೀಂ ಕೋರ್ಟ್

ದಾವಣಗೆರೆ: ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.

ಅಪಘಾತಕ್ಕೆ ಕಾರಣ ಏನು..?  ರಸ್ತೆ ಸುರಕ್ಷತೆ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ ಎನ್ನುವುದರ ಬಗ್ಗೆ ವಿವರವಾದ ಮಾಹಿತಿಯನ್ನ ನೀಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಅವರಿಗೆ ಸೂಚನೆಯನ್ನ ನೀಡಿದೆ.

ಜ.15 ರಂದು ಧಾರವಾಡ ತಾಲೂಕಿನ ಇಟಿಗಟ್ಟಿ ಗ್ರಾಮದ ಬೈಪಾಸ್‌ನಲ್ಲಿ ಟೆಂಪೊ‌ ಟ್ಯಾವಲರ್‌ ಮತ್ತು ಟಿಪ್ಪರ್‌ ನಡುವೆ ಡಿಕ್ಕಿ ಸಂಭವಿಸಿದ‌ ಪರಿಣಾಮ 13 ಜನ ಮೃತಪಟ್ಟಿದ್ದರು.ದಾವಣಗೆರೆ ನಗರದ ಸೇಂಟ್ ಪೌಲ್ಸ್ ಕಾನ್ವೆಂಟ್ ಶಾಲೆಯ ಹಳೆ ವಿದ್ಯಾರ್ಥಿಗಳೆಲ್ಲ ಸೇರಿಕೊಂಡು ಸೇರಿ ಗೋವಾಗೆ ಪ್ರವಾಸಕ್ಕೆ ಹೊರಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯಮಾನ್ಯರು ಸಂತಾಪ ಸೂಚಿಸಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});