Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ದಿನದ ವಹಿವಾಟಿನಲ್ಲಿ ಮತ್ತೆ ಕುಸಿತ; ಪ್ರತಿ ಕ್ವಿಂಟಾಲ್ ಗೆ 550 ರೂಪಾಯಿ ಬೆಲೆ ಇಳಿಕೆ

ದಾವಣಗೆರೆ

ದಾವಣಗೆರೆ: ಅಡಿಕೆ ದಿನದ ವಹಿವಾಟಿನಲ್ಲಿ ಮತ್ತೆ ಕುಸಿತ; ಪ್ರತಿ ಕ್ವಿಂಟಾಲ್ ಗೆ 550 ರೂಪಾಯಿ ಬೆಲೆ ಇಳಿಕೆ

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಮತ್ತೆ ಕುಸಿತ ಕಂಡಿದೆ. ದಿನದ ವಹಿವಾಟಿನ ಏರಿಳಿತ ನಡುವೆಯೇ ಜಿಲ್ಲೆಯ ಇವತ್ತಿನ(ಜ.27) ಮಾರುಕಟ್ಟೆ ಬೆಲೆ ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 47,039 ರೂ.ಗೆ ಮಾರಾಟವಾಗಿದೆ. ಈ ಮೂಲಕ ಕಳೆದ ದಿನದ ಮಾರುಕಟ್ಟೆಗೆ ಹೊಲಿಸಿದ್ರೆ 550 ರೂಪಾಯಿ ಇಳಿಕೆಯಾಗಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಪ್ರತಿ ಕ್ವಿಂಟಾಲ್ ಗೆ ದರ 47,037 ಗರಿಷ್ಠ ಬೆಲೆ ದಾಖಲಾಗಿದೆ. ನಿನ್ನೆ ಕ್ವಿಂಟಾಲ್ ಗೆ ಗರಿಷ್ಠ 47,599 ರೂ. ದಾಖಲಾಗಿತ್ತು. ಈ ಮೂಲಕ ಬೆಲೆಯಲ್ಲಿ ಇವತ್ತು 550 ರೂಪಾಯಿ ಇಳಿದಿದೆ. 2nd ಬೆಟ್ಟೆ ಅಡಿಕೆ ಗರಿಷ್ಠ 36,739 ಬೆಲೆಗೆ ಮಾರಾಟವಾದೆ.

ಇವತ್ತಿನ (ಜ.27) ಉತ್ತಮ ರಾಶಿಯ ಕನಿಷ್ಠ ಬೆಲೆ‌ 45,133 ಆಗಿದ್ದು, ಗರಿಷ್ಠ ಬೆಲೆ 47,039 ಹಾಗೂ ಸರಾಸರಿ ಬೆಲೆ 45,800 ಆಗಿದೆ. ಇನ್ನೂ 2nd ಬೆಟ್ಟೆ ಅಡಿಕೆ ಬೆಲೆ ಕನಿಷ್ಠ 34,679 ಗರಿಷ್ಠ ಬೆಲೆ36,739 ಹಾಗೂ ಸರಾಸರಿ ಬೆಲೆ 36,093 ಆಗಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಜಗಳೂರು, ಹರಿಹರ, ನ್ಯಾಮತಿ, ಮಾಯಕೊಂಡ ಸೇರಿದಂತೆ ಎಲ್ಲ ಕಡೆ ಅಧಿಕ ಪ್ರಮಾಣದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಅಡಿಕೆ ಬೆಲೆ ಕುಸಿತದಿಂದ ರೈತರಲ್ಲಿ ಆತಂಕ ಉಂಟು ಮಾಡಿತ್ತು. ಇದೀಗ ದಿನದಿಂದ ದಿನಕ್ಕೆ ಸ್ವಲ್ಪ ಚೇತರಿಕೆ ಕಂಡಿದ್ದರೂ ನೂರು, ಇನ್ನೂರು ರೂಪಾಯಿ ಏರಿಳಿತ ಕಾಣುತ್ತಿದೆ. ಜನವರಿ ತಿಂಗಳಲ್ಲಿ ಏರಿಕೆ ಕಾಣುತ್ತಿರುವುದು ರೈತರ ಮೊಗದಲ್ಲಿ ಸಂತಸ ಮೂಡುವಂತೆ ಮಾಡಿದೆ. ಮುಂದಿನಗಳಲ್ಲಿ ಅಡಿಕೆ ಧಾರಣೆ ಮತ್ತಷ್ಟು ಚೇತರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top