ದಾವಣಗೆರೆ: ಕೇಂದ್ರ ಸರಕಾರದ ಬ್ಯಾಂಕ್ ಖಾಸಗೀಕರಣದ ಪ್ರಸ್ತಾಪ ಮತ್ತು ಬ್ಯಾಂಕಿಂಗ್ ನಿಯಮಾವಳಿಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ಮುಷಕರಕ್ಕೆ UFBU ದಾವಣಗೆರೆ ಜಿಲ್ಲಾ ಘಟಕದ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಮುಷ್ಕರ ಹಮ್ಮಿಕೊಂಡಿದೆ.
ಇಂದು (ಮಾ.15) ಮತ್ತು ನಾಳೆ ಮುಷ್ಕರ ನಡೆಯಲಿದೆ. ದಾವಣಗೆರೆಯಲ್ಲಿ ಇಂದು ಬೆಳಿಗ್ಗೆ 11ಕ್ಕೆ ಮಂಡಿಪೇಟೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂದೆ ಹಾಗೂ ನಾಳೆ (ಮಾ.16) ಬೆಳಿಗ್ಗೆ 11-00 ಕ್ಕೆ ಮಂಡಿಪೇಟೆಯ ಕೆನರಾ ಬ್ಯಾಂಕ್ ಮುಂದೆ ಮುಷ್ಕರ ನಡೆಯಲಿದೆ ಎಂದು ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ತಿಳಿಸಿದ್ದಾರೆ.



