Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಜಿಲ್ಲಾಯಾದ್ಯಂತ ಮದ್ಯಮಾರಾಟ ನಿಷೇಧ

ದಾವಣಗೆರೆ

ದಾವಣಗೆರೆ: ನಾಳೆ ಜಿಲ್ಲಾಯಾದ್ಯಂತ ಮದ್ಯಮಾರಾಟ ನಿಷೇಧ

ದಾವಣಗೆರೆ: ಗ್ರಾಮ ಪಂಚಾಯಿತಿ ಚುನಾವಣೆ-2020ರ ಮತ ಎಣಿಕೆ ಕಾರ್ಯಗಳು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಹೀಗಾಗಿ ನಾಳೆ ಡಿ.30 ಬೆಳಗ್ಗೆ 6 ರಿಂದ 12 ಗಂಟೆ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಮತ ಎಣಿಕೆ ದಿನ ಫಲಿತಾಂಶಗಳು ಹಂತ ಹಂತವಾಗಿ ಹೊರಬರುತ್ತಿದ್ದಂತೆಯೇ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ಮತ್ತು ಗುಂಪು ಘರ್ಷಣೆಗಳು ನಡೆದು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಡಿ.30ರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದಾವಣಗೆರೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top