Connect with us

Dvgsuddi Kannada | online news portal | Kannada news online

ದುಗ್ಗಾವತಿ ಬೆಂಕಿ ಅವಘಡ; ಕಾರ್ಖಾನೆ ಮಾಲೀಕ ಸೇರಿ ಮೂವರ ವಿರುದ್ಧ ಕೇಸ್ ದಾಖಲು

ಪ್ರಮುಖ ಸುದ್ದಿ

ದುಗ್ಗಾವತಿ ಬೆಂಕಿ ಅವಘಡ; ಕಾರ್ಖಾನೆ ಮಾಲೀಕ ಸೇರಿ ಮೂವರ ವಿರುದ್ಧ ಕೇಸ್ ದಾಖಲು

ದಾವಣಗೆರೆ: ದುಗ್ಗಾವತಿಯ ಮದ್ಯ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಪಟ್ಟಂತೆ ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

Screenshot 20210108 111732

ಮದ್ಯದ ಟ್ಯಾಂಕರ್ ವೈಲ್ಡಿಂಗ್ ಮಾಡುವಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿತ್ತು. ಇದರಿಂದ ಕಾರ್ಮಿಕ ರಘು ಬೆಂಕಿಗೆ ಆಹುತಿಯಾಗಿದ್ದರು. ಮೂವರು ಗಂಭೀರವಾಗಿ ಗಾಯಗೊಂಡಿದ್ದರು.

ಸಕ್ಕರೆ ಕಾರ್ಖಾನೆ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಸೇರಿದ್ದಾಗಿದ್ದು, ಅವಘಡಕ್ಕೆ ಸಂಬಂಧಪಟ್ಟಂತೆ ಡಿಸ್ಟಿಲರೀಸ್ ಕಾರ್ಖಾನೆ ಮಾಲೀಕ ಟಿ.ಜಾನ್, ಕಂಪನಿ ವ್ಯವಸ್ಥಾಪಕ ಸೇಲ್ವಾರಾಜ್ ಮತ್ತು ಎಚ್.ಆರ್. ವ್ಯವಸ್ಥಾಪಕ ರತ್ನಾಕರ ವಿರುದ್ಧ ದೂರು ದಾಖಲಾಗಿದೆ.

ಈ ಅವಘಡದಿಂದ 25 ಕೋಟಿ ರೂಪಾಯಿ ನಷ್ಟವಾಗಿದ್ದು, 29 ಟ್ಯಾಂಕ್ ಸ್ಪಿರಿಟ್ ಬೆಂಕಿಗೆ ಆಹುತಿಯಾಗಿದೆ. ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top