ದಾವಣಗೆರೆಯಲ್ಲಿ ಮಹಾ ಮಳೆ; ಹರಿಹರ ತಗ್ಗು ಪ್ರದೇಶದ‌ ಮನೆಗಳಿಗೆ ನುಗ್ಗಿದ ನೀರು; ಹರಿಹರ-ಹರಪನಹಳ್ಳಿ ರಸ್ತೆ ಸಂಪರ್ಕ ಕಡಿತ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯಾದ್ಯಂತ ಇಡೀ ರಾತ್ರಿ ಮಹಾ ಮಳೆ ಸುರಿದಿದ್ದು, ಈ ಮಳೆ ಅಬ್ಬರಕ್ಕೆ ತೀವ್ರ ಹಾನಿ ಉಂಟಾಗಿದೆ. ಹರಿಹರ ಪಟ್ಟಣದಲ್ಲಿ ತಗ್ಗು ಪ್ರದೇಶದ‌ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಹರಿಹರದ ಕಾಳಿದಾಸ ನಗರದಲ್ಲಿ ಮಳೆಯ ನೀರು 40ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದೆ. ಮನೆ ಒಳಗೆ ಎರಡ್ಮೂರು ಅಡಿಯಷ್ಟು ನೀರು ನಿಂತಿ ಪರಿಣಾಮ ಜನರು ರಾತ್ರಿಯಿಡೀ ಪರದಾಟ ನಡೆಸುವಂತಾಗಿತ್ತು. ಇನ್ನು ತುಂಗಾಭದ್ರಾ ನದಿ ಉಕ್ಕಿ ಹರಿಯುತ್ತಿದ್ದು ಹರಿಹರ ಮತ್ತು ಹರಪನಹಳ್ಳಿ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆ ನೀರಿನಲ್ಲಿ ಮುಳುಗಿದೆ. ಇದರಿಂದ ಹರಿಹರ ಮತ್ತು ಹರಪನಹಳ್ಳಿ ನಡುವಿನ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ.

ಬುಧವಾರ ರಾತ್ರಿಯಿಂದ ಸತತವಾಗಿ ಎಂಟು ಗಂಟೆಗಳ ಕಾಲ ಬಂದ ಮಳೆಯ ಪರಿಣಾಮ ಅನೇಕ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ.‌ ಮನೆಗಳಿಗೆ ಮಳೆಯ ನೀರು ತುಂಬಿದ್ದರಿಂದ ಜನರು ಸಾಕಷ್ಟು ಸಮಸ್ಯೆ ನುಭವಿಸುವಂತಾಯಿತು. ಇಂದು ಬೆಳಗ್ಗೆಯೂ ಸಹ ಮಳೆ ಮುಂದುವರಿದಿದ್ದು, ಜನರ ಸಂಕಷ್ಟ ಸಿಲುಕಿದ್ದಾರೆ.

ದಾವಣಗೆರೆ ನಗರದಲ್ಲಿ ಚರಂಡಿಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಕ್ಕೆ ನೀರು ನುಗ್ಗಿತ್ತು. ಈರುಳ್ಳಿ ಮಾರುಕಟ್ಟೆ, ಭಾರತ್ ಕಾಲೊನಿ ಸೇರಿ ಹಲವೆಡೆ ನೀರು ನುಗ್ಗಿದೆ. ಹಳೆ ಕುಂದುವಾಡ ರಸ್ತೆ ಸಹ ಮಳೆಯ ನೀರಿನಿಂದ ಮುಳುಗಿದ ಪರಿಣಾಮ ಸಂಪರ್ಕ ಕಡಿತವಾಗಿತ್ತು.

ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಡೆಗಟ್ಟಲು ಹಾಗೂ ತುರ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ನಿರ್ದೇಶನ ನೀಡಿದ್ದಾರೆ.

ವಾಯುಭಾರ ಕುಸಿತದಿಂದ ರಾಜ್ಯದೆಲ್ಲೆಡೆ ಮಳೆಯಾಗುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿಯೂ ಕೂಡ ಎಡೆಬಿಡದೆ ಮಳೆಯಾಗುತ್ತಿದೆ. ನದಿ ಪಾತ್ರದಲ್ಲಿರುವ ಜನರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಬೇಕು.ಮಳೆಯಿಂದ ಮನೆ ಕುಸಿದು ಸಂಕಷ್ಟದಲ್ಲಿರುವ ಜನರ ರಕ್ಷಣೆ ಹಾಗೂ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *