Connect with us

Dvgsuddi Kannada | online news portal | Kannada news online

ದಾವಣಗೆರೆ: ತೋಟಗಾರಿಕೆ ರೈತರಿಗೆ 25 ಸಾವಿರ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ತೋಟಗಾರಿಕೆ ರೈತರಿಗೆ 25 ಸಾವಿರ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ 25 ಸಾವಿರ ಸಹಾಯಧನಕ್ಕೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ ಪ್ರತಿ ಹೆಕ್ಟೇರ್‍ಗೆ ವೆಚ್ಚ ರೂ.50000 ಇದ್ದು. ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ರೂ.20000 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ ರೂ.25000 ಸಹಾಯಧನವನ್ನು ನೀಡಲಾಗುವುದು.

ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ಅನುಮೋದಿತ ಕಂಪನಿಯಿಂದ ರಸಗೊಬ್ಬರ ಖರೀದಿಸಿದ ಮೊತ್ತದ ಬಿಲ್ಲುಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿಗೆ ಅ.30 ರೊಳಗೆ ಸಲ್ಲಿಸಿದ್ದಲ್ಲಿ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಸನ್ನ ಕುಮಾರ್.ಜಿ.ಹೆಚ್ ರೈ.ಸಂ.ಕೇಂದ್ರ ಕಸಬಾ ಮತ್ತು ಬಿಳಿಚೋಡು ಮೊ.ಸಂ. 9108338179, ಸುನೀಲ್ ಕುಮಾರ್. ಹೆಚ್.ಟಿ ರೈ.ಸಂ. ಕೇಂದ್ರ ಸೂಕ್ತ ಮೊ.ಸಂ. 7899942287 ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿ ಸಂಪರ್ಕಿಸಲು ತಿಳಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top