Connect with us

Dvgsuddi Kannada | online news portal | Kannada news online

ಜಗಳೂರು: ಶಿಕ್ಷಕರಿಂದ 10 ಸಾವಿರ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಬಿಇಒ

ಜಗಳೂರು

ಜಗಳೂರು: ಶಿಕ್ಷಕರಿಂದ 10 ಸಾವಿರ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಬಿಇಒ

ದಾವಣಗೆರೆ: ಜಗಳೂರು ತಾಲೂಕಿನ ಶಿಕ್ಷಕರೊಬ್ಬರಿಂದ 10 ಸಾವಿರ ಲಂಚ ಸ್ವೀಕರಿಸುವಾಗ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕ ಆಂಜನೇಯ ನಾಯ್ಕ್ ಎಂಬುವರು ತಮ್ಮನ್ನು ಜಾಲಿನಗರ ಶಾಲೆಗೆ ನಿಯೋಜನೆ ಮಾಡುವಂತೆ ಕೇಳಿಕೊಂಡಿದ್ದರು. ಈ ಕುರಿತು ಶಿಕ್ಷಣ ಸಂಯೋಜಕ ಅವರನ್ನು ಭೇಟಿ ಮಾಡುವಂತೆ ಸೂಚಿಸಿದ್ದರು. ಅವರ ಸೂಚನೆಯಂತೆ ಭೇಟಿ ಮಾಡಿದಾಗ ಬಿಇಒ 25 ಸಾವಿರ ಕೇಳಿದ್ದಾರೆ. ಈ ಹಣ ಕೊಟ್ಟರೆ ನಿಮ್ಮ ಕೆಲಸ ಆಗುತ್ತೆ ಎಂದು ಹೇಳಿದ್ದಾರೆ. ಈ ಬಗ್ಗೆ ಶಿಕ್ಷಕ ಆಂಜನೇಯ ನಾಯ್ಕ್ ಎಸಿಬಿಗೆ ದೂರು ನೀಡಿದ್ದರು. ಹತ್ತು ಸಾವಿರನ್ನು ಬಿಇಒ ಕಚೇರಿಯಲ್ಲಿ ಪಡೆದುಕೊಳ್ಳುವಾಗ ಎಸಿಬಿ ದಾಳಿ ಮಾಅಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜಗಳೂರು

To Top