ದಾವಣಗೆರೆ: ನಾಳೆ ಕುರುಬ ಸಮಾಜದ ಬೃಹತ್ ಜನ ಜಾಗೃತಿ ಸಮಾವೇಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕುರುಬಸಮುದಾಯವನ್ನು ಎಸ್ ಟಿ ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ನಾಳೆ (ಜ.06)  ಕುರುಬ ಸಮಾಜದ ಬೃಹತ್ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ರಾಜ್ಯದ  ವಿವಿಧ  ಪ್ರದೇಶದಲ್ಲಿ  ಜನ ಜಾಗೃತಿ ಸಮಾವೇಶಗಳು ಈಗಾಗಲೇ ನಡೆಯುತ್ತಿದೆ.  ನಾಳೆ  ನಗರದ ಪಿಬಿ ರಸ್ತೆಯ ಬೀರಲಿಂಗೇಶ್ವರ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದ್ದು, 25 ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ.

ಕಾಗಿನೆಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಮಠದ ಈಶ್ವರಾನಂದ ಪುರಿ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಸಿದ್ಧರಾಮಾನಂದ ಸ್ವಾಮೀಜಿ, ಸಚಿವರಾದ ಕೆ.ಎಸ್.ಈಶ್ವರಪ್ಪ, ಬಿ.ಎ.ಬಸವರಾಜ ಭೈರತಿ, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಬಂಡೆಪ್ಪ ಕಾಶೆಂಪುರ್, ಶಾಸಕರಾದ ಎಂ.ಟಿ.ಬಿ.ನಾಗರಾಜ, ಎಸ್.ರಾಮಪ್ಪ ಸೇರಿದಂತೆ ಅನೇಕರು ಪಾಲ್ಗೊಳ್ಳುವ ಪಾಲ್ಗೊಳ್ಳಲಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *