ದಾವಣಗೆರೆಯಲ್ಲಿ ಮೆಗಾ ಲೋಕ್ ಅದಾಲತ್: ರಾಜೀ ಸಂಧಾನದ ಮೂಲಕ ಹಳೇ ಕೇಸ್ ಗಳ ವಿಲೇವಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮಾ.27 ರಂದು ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮೆಗಾ ಲೋಕ್ ಅದಾಲತ್ ಆಯೋಜಿಸಿರುತ್ತಾರೆ. ಈ ಅದಾಲತ್‍ನಲ್ಲಿ ಹೆಚ್ಚು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಲು ಉದ್ದೇಶಿಸಲಾಗಿದೆ.

ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ತಾಲ್ಲೂಕು ಮಟ್ಟದಲ್ಲಿ ಮೆಗಾ ಲೋಕ್ ಅದಲಾತ್‍ನ್ನು ನಡೆಸುವ ವ್ಯವಸ್ಥೆ ಮಾಡಿ ಕೊಂಡಿರುತ್ತಾರೆ. ಕಾರಣ ಈ ಅದಾಲತ್‍ನಲ್ಲಿ ನ್ಯಾಯಲಯಗಳಲ್ಲಿ ಪೆಂಡಿಂಗ್ ಇರುವ ಹಾಗೂ ಇನ್ನೂ ದಾಖಲು ಮಾಡದೇ ಇರುವ ರಾಜೀಯಾಗುವಂತಹ ಎಲ್ಲಾ ಪ್ರಕರಣಗಳಲ್ಲಿ ಉಭಯ ಪಕ್ಷಗಾರರು ಹಾಜರಾಗಿ ತಮ್ಮ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು.

ಅದಾಲತ್‍ನಲ್ಲಿ ಎಂ.ವಿ.ಸಿ. ಪಾಲುವಿಭಾಗ, ಹಣಪಾವತಿ ದಾವೆಗಳ, ಹೆಚ್.ಆರ್.ಸಿ ಪ್ರಕರಣಗಳ ಹಾಗೂ ಇತರೆ ಸಿವಿಲ್ ದಾವೆಗಳು ಹಾಗೂ ಚೆಕ್ ಬೌನ್ಸ್ ಪ್ರಕರಣಗಳು, ಜೀವನಾಂಶದ ಅರ್ಜಿ ಪ್ರಕರಣಗಳು, ಕೌಟುಂಬಿಕ (ವಿಚ್ಚೇದನವನ್ನು ಹೊರತು ಪಡಿಸಿ) ಕಲಹಗಳ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಗೀತಾ.ಕೆ.ಬಿ ಮತ್ತು ಸದಸ್ಯ ಕಾರ್ಯದರ್ಶಿಗಳಾದ ಪ್ರವೀಣ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *