Connect with us

Dvgsuddi Kannada | online news portal | Kannada news online

2ಎ ಮೀಸಲಾತಿ ನೀಡದಿದ್ರೆ ಅಕ್ಟೋಬರ್ 15 ನಂತರ ಉಗ್ರ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ

ಪ್ರಮುಖ ಸುದ್ದಿ

2ಎ ಮೀಸಲಾತಿ ನೀಡದಿದ್ರೆ ಅಕ್ಟೋಬರ್ 15 ನಂತರ ಉಗ್ರ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ

ದಾವಣಗೆರೆ: ಸಿಎಂ ಸದನದಲ್ಲಿ ನಿಢಿದ ಭರವಸೆಯಂತೆ ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ 6 ತಿಂಗಳೊಳಗೆ 2ಎ ಮೀಸಲಾತಿ ನೀಡದಿದ್ದರೆ, ಅಕ್ಟೋಬರ್ 15ರ ನಂತರ 25 ಲಕ್ಷ ಜನ ಸೇರಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸರ್ಕಾರ ಸೆಪ್ಟೆಂಬರ್ 15ರೊಳಗೆ ಮೀಸಲಾತಿ ನೀಡುವ ವಿಶ್ವಾಸವಿದೆ. ಯಡಿಯೂರಪ್ಪ ಅವರು ನಾಲ್ಕು ಗೋಡೆಯ ಮಧ್ಯೆ ಮಾತು ಕೊಟ್ಟಿಲ್ಲ. ಅಧಿವೇಶನದಲ್ಲಿ ಮಾತು ಕೊಟ್ಟಿದ್ದಾರೆ.ಹೀಗಾಗಿ ಹೋರಾಟಕ್ಕೆ ಸ್ವಲ್ಪ ವಿರಾಮ ನೀಡಿದ್ದೇವೆ. ಒಂದು ವೇಳೆ ಭರವಸೆ ಈಡೇರಿಸದಿದ್ದರೆ ಅಕ್ಟೋಬರ್ 15ರ ನಂತರ ಮತ್ತೆ ಹೋರಾಟಕ್ಕೆ ಇಳಿಯುತ್ತೇವೆ ಎಂದು ಶ್ರೀಗಳು ಸುದ್ದಿಗೀಷ್ಟಿಯಲ್ಲಿ ಎಚ್ಚರಿಕೆ ನೀಡಿದರು.

ಜನಗಣತಿ ಹಾಗೂ ಶಾಲಾ ದಾಖಲಾತಿಗಳಲ್ಲಿ ಎಲ್ಲರೂ ಲಿಂಗಾಯತ ಪಂಚಮಸಾಲಿ ಎಂದು ಬರೆಸಬೇಕು. ಈ ರೀತಿ ನಮೂದಾಗದೇ ಇದ್ದರೆ 2ಎ ಮೀಸಲಾತಿ ಸಿಗುವುದು ಕಷ್ಟ. ಭಕ್ತರು ಸಮಾಜದ ಬೆನ್ನೆಲುಬು, ನಮ್ಮ ಮತ್ತು ಭಕ್ತರ ನಡುವೆ ತಾಯಿ ಮಗನ ಸಂಬಂಧ ಇದೆ. ದಾವಣಗೆರೆ ನಗರದಿಂದಲೇ ಭಿನ್ನಾಭಿಪ್ರಾಯ ಮರೆತು ಹೋರಾಟ ಮಾಡಿದ್ದೇವೆ. ಹರಿಹರ ಪೀಠದ ವಚನಾನಂದ ಸ್ವಾಮೀಜಿ ಅವರು ಕಾಲಿನಲ್ಲಿ ಬೊಬ್ಬೆ ಬಂದರೂ ಹೋರಾಟದಲ್ಲಿ ಪಾಲ್ಗೊಂಡು ಯಶಶ್ವಿಗೊಳಿಸಿದ್ದಾರೆ ಎಂದರು.

ಮಾಜಿ ಶಾಸಕ ಎಚ್‌.ಎಸ್. ಶಿವಶಂಕರ್, ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ, ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top