ದಾವಣಗೆರೆ: ಜಿಲ್ಲೆಯಲ್ಲಿ ನಿನ್ನೆ (ಏ. 29) ಸರಾಸರಿ 7.09 ಮಿ.ಮೀ ಮಳೆಯಾಗಿದ್ದು, ಒಟ್ಟಾರೆ 52.3 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.
ಚನ್ನಗಿರಿ13.02 ಮಿ.ಮೀ, ದಾವಣಗೆರೆ 3.7 ಮಿ.ಮೀ, ಹರಿಹರ 7.2 ಮಿ.ಮೀ, ಹೊನ್ನಾಳಿ 9.0 ಮಿ.ಮೀ ಹಾಗೂ ಜಗಳೂರು 2.54 ಮಿ.ಮೀ ಮಳೆಯಾಗಿದೆ. ಮಳೆಯಿಂದಾಗಿ ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 824 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ಅಂದಾಜು ರೂ. 48 ಲಕ್ಷ ನಷ್ಟ ಸಂಭವಿಸಿದೆ. ಹಾಗೂ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪೂರ್ಣ ಹಾಗೂ 02 ಭಾಗಶಃ ಮನೆ ಹಾನಿಯಾಗಿದ್ದು, ಅಂದಾಜು ರೂ.2 ಲಕ್ಷ ನಷ್ಟ ಸಂಭವಿಸಿದೆ. 5.08 ಎಕರೆ ಬಾಳೆ ಬೆಳೆ ಹಾನಿಯಾಗಿದ್ದು, ಅಂದಾಜು 2.30 ಲಕ್ಷ ನಷ್ಟ ಸಂಭವಿಸಿದ್ದು, ತಾಲ್ಲೂಕಿನಲ್ಲಿ ಒಟ್ಟಾರೆ ರೂ.4.30 ಲಕ್ಷ ನಷ್ಟ ಸಂಭವಿಸಿರುತ್ತದೆ.
ಜಿಲ್ಲೆಯಲ್ಲಿ ಒಟ್ಟಾರೆ ರೂ.52.3 ಲಕ್ಷ ಅಂದಾಜು ನಷ್ಟ ಸಂಭವಿಸಿದ್ದು, ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



