Connect with us

Dvgsuddi Kannada | online news portal | Kannada news online

ಎಸ್ಸೆಸ್ಸೆಲ್ಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದಾವಣಗೆರೆ ಜಿಲ್ಲೆಗೆ 23ನೇ ಸ್ಥಾನ, ಯಾದಗಿರಿ ಲಾಸ್ಟ್…!!

sslc result

ಪ್ರಮುಖ ಸುದ್ದಿ

ಎಸ್ಸೆಸ್ಸೆಲ್ಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದಾವಣಗೆರೆ ಜಿಲ್ಲೆಗೆ 23ನೇ ಸ್ಥಾನ, ಯಾದಗಿರಿ ಲಾಸ್ಟ್…!!

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು (ಮೇ 09) ಪ್ರಕಟವಾಗಿದ್ದು, ರಾಜ್ಯದಲ್ಲಿ ಶೇ 73.40 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದಾರೆ. ಉಡುಪಿ ಜಿಲ್ಲೆ ಶೇ.94 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ದಾವಣಗೆರೆ ಜಿಲ್ಲೆಯಲ್ಲು ಶೇ.77.48ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದು, 23ನೇ ಸ್ಥಾನದಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಫಲಿತಾಂಶ ಪ್ರಕಟಿಸಿದರು.

ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೈಲುಗೈಯಾಗಿದೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. 2,87,416 ಮಂದಿ ಬಾಲಕರು ತೇರ್ಗಡೆಯಾಗಿದ್ದು, ತೇರ್ಗಡೆ ಪ್ರಮಾಣ ಶೇ 65.90 ಇದೆ. 3,43,788 ಬಾಲಕಿಯರು ತೇರ್ಗಡೆಯಾಗಿದ್ದು, ತೇರ್ಗಡೆ ಪ್ರಮಾಣ ಶೇ 81.11 ಇದೆ.ವಿದ್ಯಾರ್ಥಿಯ ನೋಂದಾಯಿತ ಮೊಬೈಲ್​ ನಂಬರ್​ಗೂ ಸಹ ಫಲಿತಾಂಶದ ವಿವರದ ಎಸ್​ಎಂಎಸ್​ ಕಳುಹಿಸಲಾಗುವುದು ಎಂದು ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಫಲಿತಾಂಶ ಮಾಹಿತಿ ನೀಡಿದರು

ಜಿಲ್ಲಾವಾರು ಫಲಿತಾಂಶ: ಉಡುಪಿ ಜಿಲ್ಲೆಗೆ ಫಸ್ಟ್ , ಯಾದಗಿರಿ ಲಾಸ್ಟ್: ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದ್ದರೆ ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

  1. ಉಡುಪಿ – 94.00
  2. ದಕ್ಷಿಣಕನ್ನಡ -92.12
  3. ಶಿವಮೊಗ್ಗ – 98.67
  4. ಕೊಡುಗು- 88.67
  5. ಉತ್ತರಕನ್ನಡ- 86.54
  6. ಹಾಸನ- 86.28
  7. ಮೈಸೂರು- 85.05
  8. ಶಿರಸಿ- 84.64
  9. ಬೆಂಗಳೂರು ಗ್ರಾಮಾಂತರ – 83.67
  10. ಚಿಕ್ಕಮಗಳೂರು – 83.39
  11. ವಿಜಯಪುರ- 79.82
  12. ಬೆಂಗಳೂರು ದಕ್ಷಿಣ – 79
  13. ಬಾಗಲಕೋಟೆ- 77.92
  14. ಬೆಂಗಳೂರು ಉತ್ತರ 77.08
  15. ಹಾವೇರಿ – 75.85
  16. ತುಮಕೂರು- 75.16
  17. ಗದಗ-74.76
  18. ಚಿಕ್ಕಬಳ್ಳಾಪುರ- 73.51
  19. ಮಂಡ್ಯ- 73.59
  20. ಕೋಲಾರ- 73.57
  21. ಚಿತ್ರದುರ್ಗ -72.85
  22. ಧಾರವಾಡ -72.57
  23. ದಾವಣಗೆರೆ 77.48
  24. ಚಾಮರಾಜನಗರ 71.59
  25. ಚಿಕ್ಕೋಡಿ – 69.82
  26. ರಾಮನಗರ -69.53
  27. ವಿಜಯನಗರ -65.61
  28. ಬಳ್ಳಾರಿ- 64.90
  29. ಬೆಳಗಾವಿ -64.93
  30. ಮೂಡಗೆರೆ- 62.44
  31. ರಾಯಚೂರು – 61.2
  32. ಕೊಪ್ಪಳ – 61.16
  33. ಬೀದರ್‌- 57.52
  34. ಕಲಬುರುಗಿ – 53.04
  35. ಯಾದಗಿರಿ- 50.59

ಅಂಕಿತಾ ರಾಜ್ಯಕ್ಕೆ ಪ್ರಥಮ: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮೆಳ್ಳಿಗೇರಿಯವರಾಗಿದ್ದಾರೆ. ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top