ದಾವಣಗೆರೆ: ವಾಲ್ಮೀಕಿ ಸಮುದಾಯ ಮೀಸಲಾತಿ ಬಗ್ಗೆ ಇಂದು ನಡೆಯುತ್ತಿರುವ ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಮಾಡುವ ನಿರೀಕ್ಷೆ ಇತ್ತು. ಆದರೆ, ಈ ಬಗ್ಗೆ ವೇದಿಕೆ ಭಾಷಣ ಮಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು, ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಳ ಬಗ್ಗೆ ಸದನ ಉಪ ಸಮಿತಿ ರಚನೆ ಮಾಡಿದ್ದು, ಈ ಸಮಿತಿಗೆ ನಾನೇ ಅಧ್ಯಕ್ಷನಾಗಿದ್ಧೇನೆ. ಹೀಗಾಗಿ ಅತೀ ಶೀಘ್ರದಲ್ಲಿಯೇ ಸದನ ಸಮಿತಿ ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಲಿದ್ದು, 7.5 ರಷ್ಟು ಮೀಸಲಾತಿ ಹೆಚ್ಚಳ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.
ಸದನದ ಉಪ ಸಮಿತಿ ರಚನೆ ಮಾಡುವಾಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ನೀವೇ ಉಪ ಸಮಿತಿಗೆ ಅಧ್ಯಕ್ಷತೆ ವಹಿಸಬೇಕು ಎಂದು ಮನವಿ ಮಾಡಿದರು. ಹೀಗಾಗಿ ಅಂದಿನ ಕಾನೂನು ಸಚಿವ ಮಾಧುಸ್ವಾಮಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಉಪ ಸಮಿತಿಯಲ್ಲಿದ್ದು, ಶ್ರೀಘ್ರದಲ್ಲಿಯೇ ವರದಿ ಸಲ್ಲಿಸಲಾಗುವುದು ಎಂದರು.



