Connect with us

Dvgsuddi Kannada | online news portal | Kannada news online

ದಾವಣಗೆರೆ: ಹೊಲಿಗೆ ಯಂತ್ರ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಹೊಲಿಗೆ ಯಂತ್ರ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲೆಯಲ್ಲಿ ಶ್ರವಣದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ 15 ಹೊಲಿಗೆ ಯಂತ್ರಗಳನ್ನು ಉಚಿತವಾಗಿ ವಿತರಿಸಲು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ಶೇ.40 ಕ್ಕಿಂತ ಹೆಚ್ಚಿನ ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಯು ಕನಿಷ್ಟ 10 ವರ್ಷಗಳು ಕರ್ನಾಟಕ ವಾಸಿಯಾಗಿದ್ದು, ಪ್ರಾಧಿಕಾರದಿಂದ ವಾಸ ಸ್ಥಳ ದೃಢೀಕರಣ ಪತ್ರ ಹೊಂದಿರಬೇಕು. ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡಿರಬೇಕು. ಟೈಲರಿಂಗ್ ವೃತ್ತಿಗೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸಬೇಕು. ಆದಾಯದ ಮಿತಿ ಇರುವುದಿಲ್ಲ. ಬೇರೆ ಯಾವುದೇ ಯೋಜನೆಯಡಿ ಹೊಲಿಗೆ ಯಂತ್ರ ಪಡೆಯದೇ ಇರುವ ಬಗ್ಗೆ ನೋಟರಿಯಿಂದ ದೃಢೀಕರಿಸಿದ ಪ್ರಮಾಣಪತ್ರ ಒದಗಿಸತಕ್ಕದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-263939/263936ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜಿ.ಎಸ್.ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top
(adsbygoogle = window.adsbygoogle || []).push({});