Connect with us

Dvgsuddi Kannada | online news portal | Kannada news online

ಧಾರವಾಡದಲ್ಲಿ ಭೀಕರ ಅಫಘಾತ; ನಾಲ್ಕು ಮಕ್ಕಳು ಸೇರಿ 7 ಜನ ಸ್ಥಳದಲ್ಲಿಯೇ ಸಾವು

ಪ್ರಮುಖ ಸುದ್ದಿ

ಧಾರವಾಡದಲ್ಲಿ ಭೀಕರ ಅಫಘಾತ; ನಾಲ್ಕು ಮಕ್ಕಳು ಸೇರಿ 7 ಜನ ಸ್ಥಳದಲ್ಲಿಯೇ ಸಾವು

ಧಾರವಾಡ: ಧಾರವಾಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕ್ರೂಸರ್ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ನಾಲ್ಕು ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವನಪ್ಪಿದ್ದಾರೆ.

ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ‌ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಆರು ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಮದುವೆಗೆ  ಹೋಗುವಾಗ ಈ ಅವಘಡ ಸಂಭವಿಸಿದೆ.ಮನಸೂರ ಗ್ರಾಮದಿಂದ ಬೆನಕನಕಟ್ಟಿಗೆ ಹೋಗ್ತಿದ್ದಾಗ ಅಪಘಾತವಾಗಿದೆ. ಅಫಘಾತದಲ್ಲಿ ಅನನ್ಯ (14), ಹರೀಶ (13), ಶಿಲ್ಪಾ (34), ನೀಲವ್ವ (60), ಮಧುಶ್ರೀ (20) ಮಹೇಶ್ವರಯ್ಯ (11), ಶಂಭುಲಿಂಗಯ್ಯ (35), ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ‌ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್‌ಗೆ ದಾಖಲಿಸಲಾಗಿದೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತ ಸ್ಥಳಕ್ಕೆ ಜಿಲ್ಲಾ SP ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆ ಹಾಕುತಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top