Connect with us

Dvgsuddi Kannada | online news portal | Kannada news online

ದಾವಣಗೆರೆಯಿಂದ ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಲು ಹೋಗುತ್ತಿದ್ದ ವಿಜಯ ಮಹಾಂತೇಶ ದಾನಮ್ಮನವರ್ ಕಾರು ಅಪಘಾತ; ಕುಟುಂಬದವರಿಗೆ ಗಾಯ

ದಾವಣಗೆರೆ

ದಾವಣಗೆರೆಯಿಂದ ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಲು ಹೋಗುತ್ತಿದ್ದ ವಿಜಯ ಮಹಾಂತೇಶ ದಾನಮ್ಮನವರ್ ಕಾರು ಅಪಘಾತ; ಕುಟುಂಬದವರಿಗೆ ಗಾಯ

ಧಾರವಾಡ: ದಾವಣಗೆರೆ ಜಿಲ್ಲಾ ಪಂಚಾಯ್ತಿ (ZP) ಸಿಇಒ ಸ್ಥಾನದಿಂದ ವಿಜಯಪುರ ಜಿಲ್ಲಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ವಿಜಯಪುರ ನೂತನ ಡಿಸಿಗೆ ಗಾಯಗಳಾಗಿರುವ ಘಟನೆ ಧಾರವಾಡ ಬಳಿಯ ಬೈಪಾಸ್‌ನಲ್ಲಿ ಸಂಭವಿಸಿದೆ.

ವಿಜಯಪುರ ನೂತನ ಡಿಸಿ ವಿಜಯ ಮಹಾಂತೇಶ ದಾನಮ್ಮನವರ, ಪತ್ನಿ, ಮಕ್ಕಳಿಗೆ ಗಾಯಗಳಾಗಿದ್ದು ಗಾಯಾಳುಗಳಿಗೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ವಿಜಯ ಮಹಾಂತೇಶ ದಾನಮ್ಮನವರಿಗೆ ವಿಜಯಪುರ ಡಿಸಿಯಾಗಿ ವರ್ಗಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದಾವಣಗೆರೆಯಿಂದ  ವಿಜಯಪುರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top