Connect with us

Dvgsuddi Kannada | online news portal | Kannada news online

13 ಜನ ಬಲಿ ಪಡೆದ ಧಾರವಾಡ ರಾಷ್ಟ್ರೀಯ ಹೆದ್ದಾರಿಯನ್ನು 6 ಪಥವಾಗಿ ವಿಸ್ತರಿಸಲು ಸಚಿವ ನಿತಿನ್ ಗಡ್ಕರಿ ಸೂಚನೆ

ಪ್ರಮುಖ ಸುದ್ದಿ

13 ಜನ ಬಲಿ ಪಡೆದ ಧಾರವಾಡ ರಾಷ್ಟ್ರೀಯ ಹೆದ್ದಾರಿಯನ್ನು 6 ಪಥವಾಗಿ ವಿಸ್ತರಿಸಲು ಸಚಿವ ನಿತಿನ್ ಗಡ್ಕರಿ ಸೂಚನೆ

ಧಾರವಾಡ: ದಾವಣಗೆರೆಯ 13 ಪ್ರಯಾಣಿಕರನ್ನು ಬಲಿ ಪಡೆದ  ಹುಬ್ಬಳ್ಳಿ-ಧಾರವಾಡ ನಡುವಿನ 30 ಕಿ. ಮೀ. ಬೈಪಾಸ್ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ ಮಾರ್ಪಡಿಸಲು ಕೂಡಲೇ ಟೆಂಡರ್ ಕರೆಯುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸೂಚನೆ ನೀಡಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಕರ್ನಾಟಕದ ಹಲವು ಸಂಸದರು  ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದರು. ರಾಜ್ಯದ ರಸ್ತೆ ಯೋಜನೆಗೆಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ನಿತಿನ್ ಗಡ್ಕರಿ ಅವರು ಹುಬ್ಬಳ್ಳಿ-ಧಾರವಾಡ ನಡುವಿನ 30 ಕಿ. ಮೀ. ಬೈಪಾಸ್ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಕೂಡಲೇ ಟೆಂಡರ್ ಕರೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಯೋಜನೆಗಾಗಿ ಈಗಾಗಲೇ ವಿಸ್ತೃತ ಯೋಜನಾ ವರದಿ ತಯಾರು ಮಾಡಲಾಗಿದೆ. ಜನರ ಅನುಕೂಲಕ್ಕಾಗಿ ಆರ್. ಓ. ಬಿ. ಮತ್ತು ಆರ್. ಯು. ಬಿ. ನಿರ್ಮಾಣ ಮಾಡಲು ಸೂಚನೆ ನೀಡಲಾಗಿದೆ. ರಸ್ತೆ ಅಗಲೀಕರಣಕ್ಕೆ 33 ಹೆಕ್ಟೇರ್ ಭೂಸ್ವಾಧೀನ ಅಗತ್ಯವಿದೆ. ಭೂಮಿ ವಶಪಡಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಸೂಚಿಸಲಾಗಿದೆ.

ರಸ್ತೆಯನ್ನು ನಿರ್ಮಾಣ ಮಾಡಿ ನಿರ್ವಹಣೆಯನ್ನು ನಂದಿ ಹೈವೇ ಇನ್‌ಪ್ರಾಸ್ಟ್ರಕ್ಚರ್ ಕಂಪನಿ ಮಾಡುತ್ತಿದೆ. 6 ಪಥದ ರಸ್ತೆ ನಿರ್ಮಾಣ ಮಾಡಲು ಕಂಪನಿಯವರು ಸಹ ಒಪ್ಪಿಗೆ ನೀಡಿದ್ದಾರೆ. 6 ಪಥದ ರಸ್ತೆ ನಿರ್ಮಾಣದ ಜೊತೆಗೆ ಜನರ ಅನುಕೂಲಕ್ಕಾಗಿ ಎರಡೂ ಕಡೆ ಸರ್ವೀಸ್ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತದೆ.

 

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಕೆಲವು ದಿನಗಳ ಹಿಂದೆ ಭೀಕರ ರಸ್ತೆ ಅಪಘಾತದಲ್ಲಿ ದಾವಣಗೆರೆ ಮೂಲದ 13 ಜನರು ಮೃತಪಟ್ಟಿದ್ದರು. ಈ ಅಪಘಾತದ ನಂತರ ಬೈಪಾಸ್ ರಸ್ತೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಇದಲ್ಲದೆ ಫೆ. 06 ರಂದು ಮೃತಪಟ್ಟ ಕುಟುಂಬದವರು ಘಟನಾ ಸ್ಥಳಕ್ಕೆ ಹೋಗಿ ಜಾಗೃತಿ ಜಾಥಾ ಮಾಡಿದ್ದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});