ಆರಂಭದಲ್ಲಿ ಭರವಸೆ ಹುಟ್ಟಿಸಿ ‘ಕೈ‌’ಕೊಟ್ಟ ಮುಂಗಾರು; ಒಣಗಿದ ಬೆಳೆ; ರೈತರಿಗೆ ಸಂಕಷ್ಟ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಬೆಂಗಳೂರು: ನೈರುತ್ಯ ಮುಂಗಾರು ಮಳೆ ಆರಂಭದಲ್ಲಿ ಭರವಸೆ ಹುಟ್ಟಿಸಿ ಕಳೆದ ಎರಡು ವಾರಗಳಿಂದ ದುರ್ಬಲಗೊಂಡಿದೆ. ಮುಂಗಾರು ಹಂಗಾಮಿನ ಮೆಕ್ಕೆಜೋಳ, ರಾಗಿ, ಶೇಂಗಾ, ಉದ್ದು, ಹೆಸರು, ಅಲಸಂದೆ, ತೊಗರಿ ಸೇರಿದಂತೆ ಹಲವು ಬೆಳೆಗಳಿಗೆ ತೇವಾಂಶದ ಕೊರತೆ ಉಂಟಾಗಿ ಒಣಗುತ್ತಿವೆ.

ಕಳೆದ ವರ್ಷ ಸಂಪೂರ್ಣ ಕೈಕೊಟ್ಟಿದ ಮುಂಗಾರು ಈ ಬಾರಿ ವಾಡಿಕೆಗಿಂತ ಹೆಚ್ಚಾಗಿದ್ದು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿ ರೈತರು ಕೃಷಿ ಕಾರ್ಯದಲ್ಲಿ ತೊಡಗಿದ್ದಾರೆ. ಆಗಸ್ಟ್‌ನಲ್ಲೂ ಮಳೆ ಕಡಿಮೆಯಾಗಿತ್ತು. ಆದರೆ ಸೆಪ್ಟೆಂಬರ್‌ ತಿಂಗಳ ಎರಡೂ ವಾರದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿಲ್ಲ. ಹೀಗಾಗಿ ರೈತರು ಮಳೆ ನಿರೀಕ್ಷೆಯಲ್ಲೇ ಕಾಲ ಕಳೆಯಿವಂತಾಗಿದ್ದು, ಬೆಳೆಗೆ ನೀರಿಲ್ಲದೆ ಒಣಗುತ್ತಿವೆ. ಇದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಸೆಪ್ಟೆಂಬರ್‌ ಒಂದರಿಂದ ನಿನ್ನೆಯವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.7ರಷ್ಟು ಕಡಿಮೆ ಮಳೆಯಾಗಿದೆ. ಈ ಅವಧಿಯಲ್ಲಿ ಕರಾವಳಿ ಮತ್ತು ಮಲೆನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಆದರೆ, ರಾಜ್ಯದ ಒಳನಾಡಿನಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ.

ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. ದಕ್ಷಿಣ ಒಳನಾಡಿನಲ್ಲಿ ವಾಡಿಕೆ ಮಳೆ ಪ್ರಮಾಣ 58.9 ಮಿ.ಮೀ. ಇದ್ದು, ಕೇವಲ 15.2 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದ್ದು, ವಾಡಿಕೆಗಿಂತ ಶೇ.74ರಷ್ಟು ಕಡಿಮೆ ಮಳೆಯಾಗಿದೆ.

ಉತ್ತರ ಒಳನಾಡಿನಲ್ಲಿ ವಾಡಿಕೆ ಮಳೆ ಪ್ರಮಾಣ 60.3 ಮಿ.ಮೀ. ಇದ್ದು, 49.1 ಮಿ.ಮೀ.ನಷ್ಟು ಮಳೆಯಾಗಿದೆ. ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ಉಂಟಾಗಿದೆ.ಕಳೆದ ಎರಡು ವಾರದಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.85 ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಮನಗರ ಶೇ.77, ಕೋಲಾರ ಶೇ.90, ಚಿಕ್ಕಬಳ್ಳಾಪುರ ಶೇ.86, ತುಮಕೂರು ಶೇ.73, ಚಿತ್ರದುರ್ಗ ಶೇ.66, ದಾವಣಗೆರೆ ಶೇ.45, ಚಾಮರಾಜನಗರ ಶೇ.81, ಮೈಸೂರು ಶೇ.45, ಮಂಡ್ಯ ಶೇ.83 ರಷ್ಟು ಮಳೆ ಕೊರತೆಯಾಗಿದೆ.

ಉತ್ತರ ಒಳನಾಡಿನ ಬಳ್ಳಾರಿ ಶೇ.43, ವಿಜಯನಗರ ಶೇ.69, ಕೊಪ್ಪಳ ಶೇ.58, ರಾಯಚೂರು ಶೇ.24, ಧಾರವಾಡ ಶೇ.38, ಹಾವೇರಿ ಶೇ.51, ಗದಗ ಶೇ.68, ವಿಜಯಪುರ ಶೇ.37, ಬಾಗಲಕೋಟೆ ಶೇ.55, ಬೆಳಗಾವಿ ಜಿಲ್ಲೆಯಲ್ಲಿ ಶೇ.14 ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಉಳಿದಂತೆ ಕೆಲವು ಜಿಲ್ಲೆಗಳಲ್ಲಿ ವಾಡಿಕೆ ಇಲ್ಲವೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಸದ್ಯಕ್ಕೆ ಜೋರು ಮಳೆಯಾಗುವ ಲಕ್ಷಣಗಳಿಲ್ಲ. ಅಲ್ಲಲ್ಲಿ ಚದುರಿದಂತೆ ಹಗರುದಿಂದ ಸಾಧಾರಣ ಮಳೆಯಾಗಬಹುದು. ಮೋಡ ಕವಿದ ವಾತಾವರಣ ಮುಂದುವರೆಯಲಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *