Connect with us

Dvgsuddi Kannada | online news portal | Kannada news online

ಈ ವಾರಾಂತ್ಯದಲ್ಲಿ ಡಿಬಿಟಿ ಮೂಲಕ ಬರ ಪರಿಹಾರ ನೇರವಾಗಿ ರೈತರ ಖಾತೆಗೆ ಜಮೆ

IMG 20231213 184933

ಪ್ರಮುಖ ಸುದ್ದಿ

ಈ ವಾರಾಂತ್ಯದಲ್ಲಿ ಡಿಬಿಟಿ ಮೂಲಕ ಬರ ಪರಿಹಾರ ನೇರವಾಗಿ ರೈತರ ಖಾತೆಗೆ ಜಮೆ

ಬೆಳಗಾವಿ: ತೀವ್ರ ಬರಗಾಲದಿಂದ ತತ್ತರಿಸಿದ ಪ್ರತಿ ರೈತರಿಗೆ ಈ ವಾರದ ಅಂತ್ಯದಲ್ಲಿ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ 2,000 ರೂ. ಬರ ಪರಿಹಾರವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಗೆ ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಯೋಜನೆಗೆ ಚಾಲನೆ ದೊರೆಯಲಿದೆ. ಬೆಳೆ ಪರಿಹಾರ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಜಮೆ ಮಾಡಲಾಗುವುದು. ರೈತ ನೋಂದಣಿ ಮತ್ತು ಫಲಾನುಭವಿ ಮಾಹಿತಿ ವ್ಯವಸ್ಥೆಯಲ್ಲಿ (FRUITS) ನೋಂದಾಯಿಸಿಕೊಳ್ಳಬೇಕು. ಇದು ಮೊದಲ ಬಾರಿಗೆ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆಯನ್ನು ಪರಿಚಯಿಸಲಾಗಿರುವುದರಿಂದ ಪರಿಹಾರ ನೀಡುವುದು ಸ್ವಲ್ಪ ವಿಳಂಬವಾಗಿದೆ ಎಂದರು.

ಇನ್ನೂ ಕುಡಿಯುವ ನೀರು, ಮೇವು ಪೂರೈಕೆ ಸೇರಿದಂತೆ ಬರಗಾಲದ ಸಮಸ್ಯೆಗಳ ನಿವಾರಣೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಪಡೆಗಳನ್ನು ಸರ್ಕಾರ ರಚಿಸಿದ್ದು, ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳ ಪಿಡಿ ಖಾತೆಗಳಲ್ಲಿ 850 ಕೋಟಿ ರೂ.ಗಳು ಲಭ್ಯವಿದೆ. ಕೇಂದ್ರದ ಬರ ಅಧ್ಯಯನ ತಂಡವು ಅಕ್ಟೋಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿದೆ. ಅಕ್ಟೋಬರ್ 13 ರಂದು ತನ್ನ ವರದಿಯನ್ನು ಸಲ್ಲಿಸಿದೆ, ಆದರೆ ಇನ್ನೂ ಯಾವುದೇ ಹಣವನ್ನು ಬಿಡುಗಡೆ ಮಾಡಿಲ್ಲ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top