ಬೆಂಗಳೂರು: ಈ ಬಾರಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು, ರಾಜ್ಯದ ರೈತರು ಬಿತ್ತಿದ ಬೆಳೆ ಹಾನಿಯಾಗಿದೆ. ರಾಜ್ಯದ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ಬರ ಪರಿಹಾರ ನೀಡಲು ಕೇಂದ್ರ ಅಧ್ಯಾಯನ ತಂಡ ಬಂದು ಹೋಗಿದ್ದು, ರೈತರಿಗೆ ಪರಿಹಾರ ನೀಡಬೇಕಿದೆ. ಪರಿಹಾರ ಪಡೆಯಲು ಅರ್ಹರ ರೈತರ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದ್ದು, ಲಿಸ್ಟ್ ನಲ್ಲಿ ಹೆಸರು ಇರುವವರಿಗೆ ಮಾತ್ರ ಪರಿಹಾರ ಸಿಗಲಿದೆ. FRUITS ತಂತ್ರಾಂಶ ಮೂಲಕ ಅರ್ಹ ರೈತರ ಹೆಸರು ಪ್ರಕಟಿಸಿದೆ. ನಿಮ್ಮ (ರೈತರ) ಹೆಸರು ಈ ಲಿಸ್ಟ್ ನಲ್ಲಿ ಇದ್ಯಾ ಎಂದು ಚೆಕ್ ಮಾಡಿಕೊಳ್ಳಿ..
ರೈತರ ಅರ್ಹ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ನೀವು ಅರ್ಹರಿದ್ದೀರಾ ಎಂದು ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ… https://fruitspmk.karnataka.gov.in/MISReport/GetDetailsByAadhaar.aspx ನಂತರ ಆಧಾರ್ ಕಾರ್ಡ್ ನಮೂದಿಸಿ..ಆಗ ರೈತರ ಹೆಸರು ಮತ್ತು ರೈತರ ಗುರುತಿನ ಚೀಟಿ (FID) ಬರುತ್ತದೆ. ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಬಂದರೆ ನಿಮ್ಮ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
2023-24 ನೇ ಸಾಲಿನಲ್ಲಿ ಬರ ಪರಿಹಾರ ಪಡೆಯಲು ಪ್ರತಿ ತಾಲ್ಲೂಕಿನ ರೈತರು ತಮ್ಮ ಎಲ್ಲ ಪಹಣಿಗಳನ್ನು FRUITS ತಂತ್ರಾಂಶಕ್ಕೆ ನೋಂದಾಯಿಸಿ FID (Farmer ID) ಪಡೆಯಬೇಕಾಗಿರುತ್ತದೆ. ಇದಲ್ಲದೆ FID ಯು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ, PMKISAN ಯೋಜನೆಗಳಿಗೂ ಹಾಗೂ ಕೃಷಿ, ತೋಟಗಾರಿಕೆ ಮತ್ತು ಕೃಷಿ ಸಂಬಂಧಿತ ಇಲಾಖೆಗಳಲ್ಲಿ ರೈತರು ಸೌಲಭ್ಯಗಳನ್ನು ಪಡೆಯಲು ಅತ್ಯವಶ್ಯಕವಾಗಿರುತ್ತದೆ.
ಹೊಸದಾಗಿ ID ಮಾಡಿಸಿಕೊಳ್ಳಲು ಹಾಗೂ ಪಹಣಿಗಳನ್ನು ಸೇರ್ಪಡೆ ಮಾಡಿಸಿಕೊಳ್ಳಲು ರೈತರು ತಮ್ಮ ಎಲ್ಲಾ ಪಹಣಿಗಳು, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ ದಾಖಲಾತಿಗಳೊಂದಿಗೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತೋಟಗಾರಿಕೆ ಹಾಗೂ ಗ್ರಾಮ ಆಡಳಿತಾಧಿಕಾರಿ ಕಚೇರಿಗಳನ್ನು ಸಂಪರ್ಕಿಸುವುದು.
ಬರ ಪರಿಹಾರವನ್ನು ಪಡೆಯೋದಕ್ಕೆ ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದ ಫ್ರೂಟ್ ಐಡಿಯಲ್ಲಿ ರೈತರು ಸೂಕ್ತ ಮಾಹಿತಿ ದಾಖಲಿಸಬೇಕಿದೆ. ಈ ಮಾಹಿತಿಯಂತೆ, ನಿಮಗೆ ನೀಡಿರುವಂತ ಫ್ರೂಟ್ ಐಡಿಯ ಆಧಾರದಲ್ಲಿ, ಅದರಲ್ಲಿ ನಮೂದಿತವಾಗಿರುವ ಸರ್ವೆ ನಂಬರ್ ಗಳ ಆಧಾರ್ ಲಿಂಕ್ ಆಧಾರದ ಮೇಲೆ ಬರ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ನಿಮ್ಮ ಹೆಸರು ಲೀಸ್ಟ್ ನಲ್ಲಿ ಇದ್ರೇ ನೀವು ಬರ ಪರಿಹಾರ ಪಡೆಯಲು ಅರ್ಹರಿದ್ದೀರಿ. ನಿಮಗೆ ರಾಜ್ಯ ಸರ್ಕಾರ ನೀಡುವಂತ ಬರ ಪರಿಹಾರ ನಿಮ್ಮ ಖಾತೆಗೆ ಜಮಾ ಆಗಲಿದೆ.