ಬೆಳೆ ಹಾನಿಗೊಳಗಾದ ರೈತರರಿಗೆ ಗುಡ್ ನ್ಯೂಸ್ ; ಪ್ರತಿ ರೈತರಿಗೆ 2 ಸಾವಿರ ರೂ. ಬರ ಪರಿಹಾರ ಬಿಡುಗಡೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: 2023ನೇ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿ ಪರಿಹಾರವಾಗಿ (Drought Relief) ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಎಸ್‌ಡಿಆರ್‌ಎಫ್‌ ಅಡಿಯಲ್ಲಿ ಬರ ಪರಿಹಾರ ಬಿಡುಗಡೆ ಮಾಡಿ ರಾಜ್ಯ ಸರ್ಕಾರವು ಪ್ರತಿ ರೈತರಿಗೆ ಗರಿಷ್ಠ 2 ಸಾವಿರ ರೂಪಾಯಿ ಪರಿಹಾರ ಘೋಷಿಸಿದೆ.

ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರ ಬರ ನಿರ್ವಹಣೆಗಾಗಿ NDRF ಅನುದಾನವನ್ನು ನಿರೀಕ್ಷಿಸಿ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ 17-07-2023ರಲ್ಲಿ ಹೊರಡಿಸಿರುವ SDRF ಮಾರ್ಗಸೂಚಿಯನ್ವಯ ಅರ್ಹ ರೈತರಿಗೆ ಬರ ಪರಿಸ್ಥಿತಿಯಿಂದ ಶೇ.33ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ ಇನ್ ಪುಡ್ ಸಬ್ಸಿಡಿಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಳೆಯಾಶ್ರಿತ ಬೆಳೆ ನಷ್ಟಕ್ಕೆ ಪ್ರತಿ ಹೆಕ್ಟೇರ್ ಗಳಿಗೆ ರೂ.8,500, ನೀರಾವರಿ ಬೆಳೆಗೆ ರೂ.17,000 ಹಾಗೂ ಬಹು ವಾರ್ಷಿಕ ಬೆಳೆ ನಷ್ಟ ಪರಿಹಾರಕ್ಕೆ ರೂ.22,500 ಪರಿಹಾರವನ್ನು ನಿಗದಿ ಮಾಡಿದೆ. ರಾಜ್ಯ ಸರ್ಕಾರವು 105 ಕೋಟಿ ಬಿಡುಗಡೆ ಮಾಡಿದೆ.ಪ್ರತಿ ರೈತರಿಗೆ ಗರಿಷ್ಠ 2000ರವರೆಗೆ ರೈತರಿಗೆ ಪಾವತಿಸಲು 2023-24ನೇ ಸಾಲಿನ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *