ಬಾಗಲಕೋಟೆ : ರಾಜ್ಯದಲ್ಲಿ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮತ್ತು ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನ ಆಯೋಜನೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ಈಗಾಗಲೇ ಶೇಕಡಾ 30ರಷ್ಟು ಪಠ್ಯ ಕಡಿಮೆ ಮಾಡಲಾಗಿದೆ. ಮುಂದಿನ ತರಗತಿ ಕಲಿಕೆಗೆ ಕೊರತೆಯಾಗದಂತೆ ಪಠ್ಯ ವಿಷಯ ಕಡಿಮೆ ಮಾಡಿದ್ದೇವೆ. ಕೋವಿಡ್ ಕಾರಣದಿಂದ ಪರೀಕ್ಷೆಗೆ ಶಾಲಾ ಮಕ್ಕಳ ಹಾಜರಾತಿ ಕಡ್ಡಾಯವಲ್ಲ. ಇನ್ನು ಪರೀಕ್ಷೆಗಳನ್ನ ಯಾವ ರೀತಿ ನಡೆಸಬೇಕು ಅಂತ ಎಸ್ಎಸ್ಎಲ್ಸಿ ಮತ್ತು ಪಿಯು ಬೋಡ್೯ಗಳು ತೀಮಾ೯ನಿಸುತ್ತವೆ ಎಂದರು.
ಖಾಸಗಿ ಶಾಲೆಗಳ ಶುಲ್ಕ ಕುರಿತು ಪೊಲೀಷಕರು ಮತ್ತು ಶಿಕ್ಷಣ ಸಂಸ್ಥೆಗಳ ಹಗ್ಗಜಗ್ಗಾಟದಿಂದ ಮಕ್ಕಳ ಮೇಲೆ ಪರಿಣಾಮ ಬೀಳುವ ಸಾಧ್ಯತೆಯಿದೆ. ಈ ಕುರಿತು ಶೀಘ್ರವೇ ಸೂಕ್ತ ನಿರ್ಧಾರ ಸೂಕ್ತ ತೆಗೆದುಕೊಳ್ಳಲಾಗುವುದು ಎಂದರು.