Connect with us

Dvgsuddi Kannada | online news portal | Kannada news online

ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆ ಬರೆಸಿದ ಆರೋಪ; ಅಧಿಕಾರಿ ಅಮಾನತು

suspended

ರಾಜ್ಯ ಸುದ್ದಿ

ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆ ಬರೆಸಿದ ಆರೋಪ; ಅಧಿಕಾರಿ ಅಮಾನತು

ಶಿವಮೊಗ್ಗ: ಪಿಯುಸಿ‌ ನಂತರ ವಿವಿಧ ವೃತ್ತಿಪರ ಕೋರ್ಸ್​​ಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಯೋಜಿಸಿದ್ದ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆ ಬರೆಸಿದ ಆರೋಪ ಹಿನ್ನೆಲೆ ಅಧಿಕಾರಿಯನ್ನು ಅಮಾನತು (suspension) ಮಾಡಲಾಗಿದೆ.ಈ ಪ್ರಕರಣಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಕೇಳಿ ಬಂದಿದೆ. ಇದಕ್ಕೆ ಬ್ರಾಹ್ಮಣ ಸಚಿವರು, ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇದೀಗ ಪರೀಕ್ಷಾ ಕೇಂದ್ರದ ಅಧಿಕಾರಿಯನ್ನು ತಕ್ಷಣವೇ ಅಮಾನತು ಮಾಡುವಂತೆ ಡಿಸಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆದೇಶ ಹೊರಡಿಸಿದ್ದಾರೆ.

ಬೀದರ್​​​​ನಲ್ಲಿಯೂ ಇದೇ ರೀತಿ ಪ್ರಕರಣ ವರದಿಯಾಗಿದ್ದು, ಅಧಿಕಾರಿಯನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಿದ್ದಾರೆ. ಅಮಾನತು ಮಾಡುವುದು ಮಾತ್ರವಲ್ಲ ಕ್ಷಮೆಯಾಚಿಸಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ ಸರ್ಕಾರಕ್ಕೆ ಆಗ್ರಹಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top