Connect with us

Dvgsuddi Kannada | online news portal | Kannada news online

5,8,9,11 ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಮತ್ತೆ ಅನುಮತಿ

high court karnataka

ಪ್ರಮುಖ ಸುದ್ದಿ

5,8,9,11 ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಮತ್ತೆ ಅನುಮತಿ

ಬೆಂಗಳೂರು: 5,8,9,11 ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಮತ್ತೆ ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ತಡೆಯಿಂದ ಪೋಷಕರು, ವಿದ್ಯಾರ್ಥಿಗಳ ಗೊಂದಲಕ್ಕೆ ಹೈಕೋರ್ಟ್ ತೆರೆ ಎಳೆದಿದೆ.

ಈ ಮೊದಲು ಪರೀಕ್ಷೆ ನಡೆಸಲು ತಡೆಯಾಜ್ಞೆ ನೀಡಿತ್ತು. ಇದೀಗ ಮಹತ್ವದ ಆದೇಶ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದೆ. ಎರಡು ಪರೀಕ್ಷೆ ನಡೆದ ನಂತರ ಪರೀಕ್ಷೆಗೆ ತಡೆಯಾಜ್ಞೆ ನೀಡಿದ್ದ ಕೋರ್ಟ್, ಇದೀಗ ಮತ್ತೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ.

ಬೋರ್ಡ್ ಪರೀಕ್ಷೆ ನಡೆಸುವ ವಿಚಾರಕ್ಕೆ ಈ ಹಿಂದೆ ಹೈಕೋರ್ಟ್ ಸುತ್ತೋಲೆಯನ್ನು ರದ್ದು ಪಡಿಸಿತ್ತು. ರಾಜ್ಯ ಸರ್ಕಾರದ ಸುತ್ತೋಲೆ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಸಂಘಟನೆ ಮೇಪ್ಮನವಿ ಸಲ್ಲಿಸಿತ್ತು. ಇದೀಗ ಈ ಸಂಬಂಧ ನ್ಯಾ.ಕೆ ಸೋಮಶೇಖರ್ ಹಾಗೂ ರಾಜೇಶ್ ರೈ ಕೆ ಅವರ ನೇತೃತ್ವದ ಪೀಠ ಪರೀಕ್ಷೆಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ರುಪ್ಸಾ ಕಾನೂನು ಹೋರಾಟಕ್ಕೆ ಹಿನ್ನಡೆಯಾಗಿದೆ.

ಹೈಕೋರ್ಟ್ ನಿಂದ ತಡೆಯಾಜ್ಞೆ ಬಂದ ಹಿನ್ನೆಲೆ 5,8,9,11ನೇ ತರಗತಿಯ ಮಕ್ಕಳಿಗೆ ನಡೆಸುವ ಬೋರ್ಡ್ ಪರೀಕ್ಷೆಯ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿತ್ತು. ಇದೀಗ ಎಲ್ಲಾ ಸಿದ್ಧತೆಗಳ‌ನ್ನು ಮಾಡಿಕೊಳ್ಳಲಿದೆ. ರಾಜ್ಯ ಸರ್ಕಾರದ ಪಠ್ಯ ಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರ ಬೋರ್ಡ್ ಪರೀಕ್ಷೆ ನಡೆಸಲಿದೆ‌.

ಖಾಸಗಿ ಶಾಲಾ ಒಕ್ಕೂಟ ಬೋರ್ಡ್ ಎಕ್ಸಾಂ ಬೇಡ ಎಂದು ಕೋರ್ಟ್ ಮೆಟ್ಟಿಲೇರಿತ್ತು. ಈ ನಡುವೆ ಶಾಲಾ ಹಂತದಲ್ಲೇ ಪರೀಕ್ಷೆ ನಡೆಸಲು ಪೋಷಕರು ಕೂಡ ಹೇಳಿದ್ದರು. ಆದರೆ ಶಿಕ್ಷಣ ಇಲಾಖೆ ಬೋರ್ಡ್ ಎಕ್ಸಾಂ ನಡೆಸಲೇಬೇಕು ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದೆ. ಈಗಾಗಲೇ ಶಿಕ್ಷಣ ಇಲಾಖೆ ಎರಡು ವಿಷಯಗಳ ಕುರಿತು ಬೋರ್ಡ್ ಪರೀಕ್ಷೆಯನ್ನ ನಡೆಸಿದೆ. ಉಳಿದ ವಿಷಯಗಳ ಪರೀಕ್ಷೆ ನಡೆಸಲು ಈ ಹಿಂದೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದರಿಂದ ವಿದ್ಯಾರ್ಥಿಗಳು ಗೊಂದಲ್ಲಿ ಸಿಲುಕಿದ್ದರು. ಆದರೆ ಈಗ ಹೈಕೋರ್ಟ್​ ಪರೀಕ್ಷೆಗೆ ಗ್ರೀನ್​ ಸಿಗ್ನಲ್ ನೀಡಿ ಗೊಂದಲಕ್ಕೆ ತೆರೆ ಎಳೆದಿದೆ.

ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ: ಈಗಾಗಲೇ 11 ನೇ ತರಗತಿಯ ಎಲ್ಲಾ ಪರೀಕ್ಷೆಗಳು ಮುಗಿದಿವೆ. 5, 8, 9ನೇ ತರಗತಿಗಳಲ್ಲಿ ಕೂಡ ಎರಡು ವಿಷಯಗಳ ಪರೀಕ್ಷೆ ಮುಗಿದಿದ್ದು, ಉಳಿದ ವಿಷಯಗಳ ಪರೀಕ್ಷೆಗಳನ್ನ ಸೋಮವಾರದಿಂದ ಆರಂಭಗೊಳಿಸುವ ಸಾಧ್ಯತೆ. ಪರೀಕ್ಷೆ ದಿನಾಂಕ ನಿಗದಿಪಡಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಲಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top