ಬೆಂಗಳೂರು : ಸರ್ಕಾರಿ ಶಿಕ್ಷಕರಿಗೆ ನೀಡಲಾಗುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು
ಸುದ್ದಿಗಾರರ ಜೊತೆ ಮಾತನಾಡಿದ ಅವರು ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸಲಾಗುವುದು. ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿ ಚರ್ಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸರ್ಕಾರಿ ನೌಕರರಿಗಿರುವ ಸೌಲಭ್ಯಗಳನ್ನು ನೀಡುವಲ್ಲಿ ಸರ್ಕಾರ ಮುಕ್ತವಾಗಿದ್ದು, ಈ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ತಿಳಿಸಲಾಗುವುದು ಎಂದರು.



