Connect with us

Dvgsuddi Kannada | online news portal | Kannada news online

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪ್ರವೇಶಕ್ಕೆ ಮಾ. 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

ದಾವಣಗೆರೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪ್ರವೇಶಕ್ಕೆ ಮಾ. 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2021-22ರ ಜನವರಿ ಆವೃತಿಯ ಪ್ರಥಮ ವರ್ಷದ ಬಿ.ಎ. ಬಿ.ಕಾಂ. ಬಿ.ಎಲ್.ಐ.ಎಸ್ಸಿ, ಬಿ.ಬಿ.ಎ, ಬಿ.ಎಸ್ಸಿ, ಬಿ.ಸಿ.ಎ, ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಎಲ್.ಐ.ಎಸ್ಸಿ, ಎಂ.ಎಸ್ಸಿ. ಪ್ರೋಗ್ರಾಮ್ಸ್ ಸ್ನಾತಕ/ಸ್ನಾತಕೋತ್ತರ ಪದವಿಗಳಿಗೆ ಹಾಗೂ ಪಿಜಿ ಡಿಫ್ಲೋಮೋ / ಡಿಫ್ಲೋಮೋ /ಸರ್ಟಿಫಿಕೇಟ್ ಕೋರ್ಸ್ ಅಧ್ಯಯನ ವಿಷಯಗಳಿಗೆ ಸಂಬಂಧಿಸಿದಂತೆ ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಯಾವುದೇ ದಂಡ ಶುಲ್ಕವಿಲ್ಲದೇ ಅರ್ಜಿ ಸಲ್ಲಿಸಲು ಮಾ.31 ರಂದು ಅಂತಿಮ ದಿನಾಂಕವಾಗಿರುತ್ತದೆ.

ಬಿ.ಇಡಿ, ಶಿಕ್ಷಣ ಕ್ರಮದ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾ.15 ರಂದು ಅಂತಿಮ ದಿನವಾಗಿರುತ್ತದೆ. ಬಿ.ಇಡಿ, ಶಿಕ್ಷಣ ಕ್ರಮದ ಸಾಮಾನ್ಯ ಪ್ರವೇಶ ಪರೀಕ್ಷೆಯ ಪರಿಷ್ಕøತ ದಿನಾಂಕ ಮಾ.20 ರಂದು ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್ ಸೈಟ್ www.ksoumysuru.ac.in ಅಥವಾ ಮೊ.ನಂ. 8095939359, 9916009318, 9008905457 ಕರೆ ಮಾಡಿ ಸಂಪರ್ಕಿಸಬಹುದು ಅಥವಾ ಪ್ರಾದೇಶಿಕ ಕೇಂದ್ರ ಕಛೇರಿಗೆ ಖುದ್ದು ಭೇಟಿ ನೀಡಿ ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕ ಡಾ. ವಿಜಯ್‍ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top