Connect with us

Dvgsuddi Kannada | online news portal | Kannada news online

ದೈಹಿಕ ಶಿಕ್ಷಕರಿಗೆ ಮುಖ್ಯ ಶಿಕ್ಷಕ ಹುದ್ದೆಗೆ ಮುಂಬಡ್ತಿ ನೀಡಲು ಸಾಧ್ಯವಿಲ್ಲ ; ಸಚಿವ ಮಧು ಬಂಗಾರಪ್ಪ

ಪ್ರಮುಖ ಸುದ್ದಿ

ದೈಹಿಕ ಶಿಕ್ಷಕರಿಗೆ ಮುಖ್ಯ ಶಿಕ್ಷಕ ಹುದ್ದೆಗೆ ಮುಂಬಡ್ತಿ ನೀಡಲು ಸಾಧ್ಯವಿಲ್ಲ ; ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಖ್ಯ ಶಿಕ್ಷಕ ಹುದ್ದೆಗೆ ಮುಂಬಡ್ತಿ ನೀಡಲು ಸಾಧ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ದಾವಣಗೆರೆ: ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಸಹೋದರಿಯರು ಸೇರಿ ಮೂವರು ನೀರುಪಾಲು

ವಿಧಾನಪರಿಷತ್‍ನಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಪ್ರಶ್ನೆಗೆ ಉತ್ತರಿಸಿ, ದೈಹಿಕ‌‌ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಬೇರೆಯಾಗಿರುವುದರಿಂದ ಮುಖ್ಯ ಶಿಕ್ಷಕ ಹುದ್ದೆಗೆ ಮುಂಬಡ್ತಿ ನೀಡಲು ಸಾಧ್ಯವಿಲ್ಲ. ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಪ್ರೊ.ಎಲ್.ಆರ್ ವೈದ್ಯನಾಥನ್ ವರದಿ ಆಧರಿಸಿ ದೈಹಿಕ ಶಿಕ್ಷಕರಿಗೆ ಮುಂಬಡ್ತಿ ನೀಡುವುದನ್ನು ಪರಿಶೀಲಿಸಲಾಗುವುದು ಎಂದರು.

ದಾವಣಗೆರೆ ಅಡಿಕೆ ಧಾರಣೆ: ಮಾ.17ರ ದರ ಎಷ್ಟಿದೆ..?

ವೃಂದ ಮತ್ತು ನೇಮಕಾತಿ ನಿಯಮದಂತೆ ನಿಗದಿಪಡಿಸಿರುವ ವಿದ್ಯಾರ್ಹತೆ ಎಂದರೆ ಪದವಿ ಜೊತೆಗೆ ಶೈಕ್ಷಣಿಕ ಆಡಳಿತಕ್ಕೆ ಅಗತ್ಯ ಇರುವ ಬಿಇಡಿ ಪದವಿ ನಿಗದಿಪಡಿಸಲಾಗಿದೆ. ದೈಹಿಕ ಶಿಕ್ಷಣ ಶಿಕ್ಷಕರು ಬಿಇಡಿ ಪದವಿಯನ್ನು ಹೊಂದಿರುವುದಿಲ್ಲ. ಆದ್ದರಿಂದ ಮುಂಬಡ್ತಿ ನೀಡುವುದು ಸಮಸ್ಯೆಯಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಮುಖ್ಯ ಶಿಕ್ಷಕರು ಭೋದನೆಯಲ್ಲಿ ವಿಷಯ ಪ್ರಾವೀಣ್ಯತೆ ಹಾಗೂ ಅನುಭವನ್ನು ಹೊಂದಿರುತ್ತಾರೆ. ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ಸದರಿ ವಿಷಯ ಭೋದಿಸಲಿದ್ದಾರೆ. ಆದರೆ, ದೈಹಿಕ ಶಿಕ್ಷಕರಿಗೆ ವಿಷಯ ಭೋದನೆ ತರಬೇತಿಯಿಲ್ಲ. ಹೀಗಾಗಿ, ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಭೋದನೆಯನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಮಧು ಬಂಗಾರಪ್ಪ ತಿಳಿಸಿದರು.

ದೈಹಿಕ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುತ್ತಿದ್ದು, ಇವರ ಪ್ರಾವೀಣ್ಯತೆ ಹಾಗೂ ಅನುಭವ ಆಧಾರದ ಮೇಲೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಸಹಾಯಕ ನಿರ್ದೇಶಕರು, (ದೈಹಿಕ ಶಿಕ್ಷಣ), ಸಹ ನಿರ್ದೇಶಕರು (ದೈಹಿಕ ಶಿಕ್ಷಣ) ಹುದ್ದೆಗಳಿಗೆ ಮುಂಬಡ್ತಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top