Connect with us

Dvgsuddi Kannada | online news portal | Kannada news online

ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದ್ರೆ 70 ಕ್ಷೇತ್ರದಲ್ಲಿ ನಮ್ಮ ಸಮಾಜಕ್ಕೆ‌ ಟಿಕೆಟ್ ನೀಡಿ; ಕೆಪಿಸಿಸಿಗೆ ಶಾಮನೂರು ಶಿವಶಂಕರಪ್ಪ ಮನವಿ

ಪ್ರಮುಖ ಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದ್ರೆ 70 ಕ್ಷೇತ್ರದಲ್ಲಿ ನಮ್ಮ ಸಮಾಜಕ್ಕೆ‌ ಟಿಕೆಟ್ ನೀಡಿ; ಕೆಪಿಸಿಸಿಗೆ ಶಾಮನೂರು ಶಿವಶಂಕರಪ್ಪ ಮನವಿ

ದಾವಣಗೆರೆ: ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೆಂದ್ರೆ ವೀರಶೈವ ಲಿಂಗಾಯತ ಸಮುದಾಯಕ್ಕೆ ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ 70 ಕ್ಷೇತ್ರದ ಟಿಕೆಟ್ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮನವಿ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಲಿಂಗಾಯತ-ವೀರಶೈವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಪಕ್ಷ ಅಧಿಕಾರಕ್ಕೆ ಬರಲು ಈ ಸಮುದಾಯದ ಸೆಳೆಯುವುದು ಅಗತ್ಯ. ಲಿಂಗಾಯತರ ಬೆಂಬಲದಿಂದಲೇ ಬಿಜೆಪಿ ಅತಿ ಹೆಚ್ಚಿನ ಸ್ಥಾನ ಗೆಲ್ಲುತ್ತಿದೆ. ಬಿಜೆಪಿ ಮತ ಬ್ಯಾಂಕ್ ಕಬಳಿಸಬೇಕೆಂದರೆ ಕಾಂಗ್ರೆಸ್ ಪಕ್ಷದಲ್ಲಿನ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗಳಿಗೆ ಹೆಚ್ಚಿನ ಟಿಕೆಟ್ ನೀಡಬೇಕು‌ ಎಂದು ಮನವಿಯಲ್ಲಿ ಸಿಳಿಸಿದ್ದಾರೆ.

ಕಳೆದ ಸಲ 40ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಸಮಾಜದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. 16 ಜನ ಗೆದ್ದಿದ್ದಾರೆ. ಈ ಬಾರಿ 70 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಸೋಲಿಸಲು ಸಹಾಯಕವಾಗುತ್ತದೆ. ಪಕ್ಷದ ಹಾಲಿ ಶಾಸಕರ ಕ್ಷೇತ್ರಗಳನ್ನು ಹೊರತುಪಡಿಸಿ ವೀರಶೈವ ಮತ್ತು ಲಿಂಗಾಯತ ಸಮುದಾಯದ ಮತಗಳು ನಿರ್ಣಾಯಕವಾಗಿರುವ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತ ಮುಖಂಡರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು. ಟಿಕೆಟ್ ನೀಡುವ ಕ್ಷೇತ್ರಗಳ ಪಟ್ಟಿಯನ್ನೂ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೆಪಿಸಿಸಿ ವತಿಯಿಂದ ಯಾವ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತ ಸಮುದಾಯದವರಿಗೆ ಟಿಕೆಟ್ ನೀಡಿದರೆ ಗೆಲ್ಲಬಹುದು ಎಂದು ವರದಿ ನೀಡುವಂತೆ ಶಾಮನೂರು ಶಿವಶಂಕರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚಿಸಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top