Connect with us

Dvgsuddi Kannada | online news portal | Kannada news online

ಮತ್ತೆ ರೈತರ ಜಮೀನಿನ ಪೋಡಿ ದುರಸ್ತಿ ಅಭಿಯಾನ ಆರಂಭ

ಪ್ರಮುಖ ಸುದ್ದಿ

ಮತ್ತೆ ರೈತರ ಜಮೀನಿನ ಪೋಡಿ ದುರಸ್ತಿ ಅಭಿಯಾನ ಆರಂಭ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ‌ (ಸೆಪ್ಟೆಂಬರ್‌ 2) ಪೋಡಿ ದುರಸ್ತಿ ಅಭಿಯಾನ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ದಶಕಗಳ ಹಿಂದೆ ಮಂಜೂರಾಗಿದ್ದ ಸರ್ಕಾರಿ ಜಮೀನು ಸಹ, ಪೋಡಿ ದುರಸ್ತಿ ಆಗದೆ ಬಾಕಿ ಉಳಿದಿದೆ.ತೊಂದರೆ ಅನುಭವಿಸುತ್ತಿರುವ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಅಕ್ರಮ -ಸಕ್ರಮದಡಿ ಮಂಜೂರಾಗಿದ್ದರೂ, ದಶಕಗಳಿಂದ ಪೋಡಿ ದುರಸ್ತಿ ಬಾಕಿ ಇದ್ದು, ಲಕ್ಷಾಂತರ ರೈತರು ವರ್ಷಗಳಿಂದ ಪ್ರಯತ್ನಿಸುತ್ತಿದ್ದರೂ ಕೆಲವರ ಜಮೀನು ಮಾತ್ರ ಪೋಡಿ ದುರಸ್ತಿಯಾಗಿದೆ. ಇದರಿಂದ ಅನೇಕ ರೈತರು ತೊಂದರೆಗೊಳಗಾಗಿದ್ದಾರೆ. ಸೆಪ್ಟೆಂಬರ್ 2ರಿಂದ ಅಭಿಯಾನ ಮಾದರಿಯಲ್ಲಿ ಒಂದರಿಂದ ಐದು ನಮೂನೆ ಪೋಡಿ ದುರಸ್ತಿ ಕೆಲಸಕ್ಕೆ ಮುಂದಾಗಬೇಕು ಎಂದು ತಿಳಿಸಿದ್ದಾರೆ.

ಮಂಜೂರಾದ ಜಮೀನಿಗೆ ಪೋಡಿಯಾಗದ ಕಾರಣ ಆರ್.ಟಿ.ಸಿ.ಯೂ ಇಲ್ಲದಂತಾಗಿದ್ದು, ರೈತರಿಗೆ ತೊಂದರೆಯಾಗಿದೆ. ಕಚೇರಿಗಳಿಗೆ ಅಲೆದು ಸುಸ್ತಾಗಿದ್ದಾರೆ. ಮುಖ್ಯಮಂತ್ರಿಗಳ ಸೂಚನೆಯಂತೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಲಾಗಿದೆ. ಸಮಸ್ಯೆ ಮುಕ್ತ ಪೋಡಿ ದುರಸ್ತಿಗೆ ನಮೂನೆ ಒಂದರಿಂದ ಐದರ ಕಡತಗಳನ್ನು ಡಿಜಿಟಲ್ ಕಡತಗಳನ್ನಾಗಿ ತಯಾರಿಸಲಾಗುತ್ತದೆ. ಡಿಜಿಟಲ್ ಆಯಪ್ ನಿಂದ ಸರಳ ವೇಗ ಮತ್ತು ಪಾರದರ್ಶಕವಾಗಿ ಮೂಲ ಮಂಜೂರು ದಾಖಲೆ ಸುರಕ್ಷಿತವಾಗಿಡಬಹುದು ಎಂದು ತಿಳಿಸಿದ್ದಾರೆ.

 

https://x.com/KarnatakaVarthe/status/1829860424012960082?t=rEHboDUqk-re8AZXhJNNnA&s=19

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top