Connect with us

Dvgsuddi Kannada | online news portal | Kannada news online

1,500 ಕೋಟಿ ಮೌಲ್ಯದ 2,600 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು; 3 ಎಕರೆಗಿಂತಲೂ ಹೆಚ್ಚು ಅರಣ್ಯ ಒತ್ತುವರಿ ಮಾಡಿದ್ರೆ ನಿರ್ದಾಕ್ಷಿಣ್ಯ ಕ್ರಮ

Eshwara khandre 1

ಪ್ರಮುಖ ಸುದ್ದಿ

1,500 ಕೋಟಿ ಮೌಲ್ಯದ 2,600 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು; 3 ಎಕರೆಗಿಂತಲೂ ಹೆಚ್ಚು ಅರಣ್ಯ ಒತ್ತುವರಿ ಮಾಡಿದ್ರೆ ನಿರ್ದಾಕ್ಷಿಣ್ಯ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಒಂದು ವರ್ಷದಲ್ಲಿ 371 ಪ್ರಕರಣಗಳಲ್ಲಿ ಸುಮಾರು 2602.30 ಎಕರೆ ಒತ್ತುವರಿ ತೆರವುಗೊಳಿಸಲಾಗಿದೆ. ತೆರವು ಮಾಡಲಾದ ಅರಣ್ಯ ಭೂಮಿಯ ಮಾರುಕಟ್ಟೆ ಮೌಲ್ಯ ಸುಮಾರು 1500 ಕೋಟಿ ರೂ. ಆಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, 3 ಎಕರೆಗಿಂತಲೂ ಕಡಿಮೆ ಭೂಮಿ ಇರುವ ಬಡ ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಹಾಗೂ 3 ಎಕರೆಗಿಂತಲೂ ಹೆಚ್ಚು ಅರಣ್ಯ ಒತ್ತುವರಿ ಮಾಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿದೆ.

ಕೋಲಾರದಲ್ಲಿ ಅತಿ ಹೆಚ್ಚು ಅಂದರೆ 1392.41 ಎಕರೆ ಅರಣ್ಯ ಜಮೀನು ಒತ್ತುವರಿ ತೆರವು ಮಾಡಿಸಲಾಗಿದೆ. ಮಡಿಕೇರಿಯಲ್ಲಿ 5ಎಕರೆ 50ಗುಂಟೆ ತೆರವು ಮಾಡಲಾಗಿದೆ. ಬೆಂಗಳೂರಿನ ಕೊತ್ತನೂರಿನಲ್ಲಿ 17 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು 500 ಕೋಟಿ ರೂ.ಗೂ ಅಧಿಕ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top