ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಇಂದು (ಡಿ.27) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದ್ದು, ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ
ಇಙದು ಸರ್ಕಾರಿ ರಜೆ ಘೋಷಣೆ ಮಾಡಿದ್ದು, ಶಾಲಾ-ಕಾಲೇಜುಗಳು, ಬ್ಯಾಂಕ್ಗಳು ಹಾಗೂ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುವುದಿಲ್ಲ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಡಾ. ಮನಮೋಹನ್ ಸಿಂಗ್ ಅವರು ಇಂದು ದೆಹಲಿಯ ಏಮ್ಸ್ನಲ್ಲಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರನ್ನು ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲು ಮಾಡಲಾಗಿತ್ತು. ರಾತ್ರಿಯ ವೇಳೆಗೆ ಅವರು ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿದ್ದಾರೆ. ರಾತ್ರಿ 8.06 ನಿಮಿಷಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ರಾತ್ರಿ 9.51ಕ್ಕೆ ಅವರು ಅಸುನೀಗಿದ್ದಾರೆ ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ಬುಲೆಟಿನ್ನಲ್ಲಿ ತಿಳಿಸಿದ್ದಾರೆ.



