ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಇನ್ಮುಂದೆ ಸರ್ಕಾರರು ಮೃತಪಟ್ಟರೇ ಹೆಣ್ಣು ಮಕ್ಕಳಿಗೂ ನೌಕರಿ ನೀಡುವ ನಿರ್ಧಾರ ಕೈಗೊಂಡಿದೆ.
ಸರ್ಕಾರಿ ನೌಕರರು ಮೃತಪಟ್ಟಾಗ ಆ ಕುಟುಂಬದಲ್ಲಿ ಗಂಡು ಮಕ್ಕಳಿಲ್ಲದೇ ಕೇವಲ ಹೆಣ್ಣು ಮಕ್ಕಳಿದ್ದರೆ ಅವರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಲು ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ಅದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.ಒಂದು ವೇಳೆ ಹೆಣ್ಣು ಮಕ್ಕಳಿಗೆ ಮದುವೆ ಆಗಿದ್ದರೂ ನೌಕರಿ ನೀಡಲು ತೀರ್ಮಾನಿಸಲಾಗಿದೆ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಸಂಪುಟ ಸಭೆಯ ಬಳಿಕ ತಿಳಿಸಿದರು.
ಸ್ವಂತ ಮಕ್ಕಳಿಲ್ಲದೇ ಸಾಕು ಮಕ್ಕಳಿದ್ದರೂ ಅವರಿಗೆ ನೌಕರಿ ನೀಡಲಾಗುವುದು. ಅನುಕಂಪದ ಆಧಾರದಲ್ಲಿ ನೌಕರಿ ಪಡೆಯಲು ಕುಟುಂಬ ಸದಸ್ಯರು ಯಾರು ಅರ್ಹರು ಎಂಬುದರ ವ್ಯಾಖ್ಯೆಯನ್ನೂ ಕರ್ನಾಟಕ ನಾಗರಿಕ ಸೇವಾ(ಅನುಕಂಪದ ಆಧಾರದ ಮೇಲೆ ನೇಮಕಾತಿ)( ತಿದ್ದುಪಡಿ) ನಿಯಮಗಳು2020 ದಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ತಿಳಿಸಿದರು.



