Connect with us

Dvgsuddi Kannada | online news portal | Kannada news online

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 150 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ 75 ಸಾವಿರ ವೇತನ…!

IMG 20231025 152134

ಪ್ರಮುಖ ಸುದ್ದಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 150 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ 75 ಸಾವಿರ ವೇತನ…!

ಬೆಂಗಳೂರು: ಕರ್ನಾಟಕ ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 150 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ಗುತ್ತಿಗೆ ಆಧಾರದ ಮೇಲೆ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಎರಡು ವರ್ಷಗಳ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆಯನ್ನು ವರ್ಷದಿಂದ ವರ್ಷಕ್ಕೆ ಮಾಡಲಾಗುವುದು.

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಈ ಕೆಳಗಂಡ ಹುದ್ದೆಗಳ ಭರ್ತಿ ನಡೆಸಲಾಗುವುದು. ಹುದ್ದೆಗಳ ವಿವರ ಈ ರೀತಿ ಇದೆ.

  • ಪ್ರೊಕ್ಯೂರ್​ಮೆಂಟ್​ (ಸಂಗ್ರಹಣ) ಸಮಾಲೋಚಕ 31
  • ನಿರ್ವಹಣೆ ಮತ್ತು ಮೌಲ್ಯಮಾಪನ ಸಮಾಲೋಚಕ 31
  • ಪರಿಸರ ಸಮಾಲೋಚಕ -31
  • ಸಾಮಾಜಿಕ ಅಭಿವೃದ್ಧಿ ಸಮಾಲೋಚಕ – 31
  • ಹಣಕಾಸು ಸಮಾಲೋಚಕ -31

ಆಯಾ ಹುದ್ದೆಗಳ ವಿದ್ಯಾರ್ಹತೆ: ಸಂಗ್ರಹಣ ಸಮಾಲೋಚಕ – ಸಿವಿಲ್​ ಇಂಜಿನಿಯರಿಂಗ್​ನಲ್ಲಿ ಬಿಇ, ಬಿಟೆಕ್​ ಪದವಿ, ನಿರ್ವಹಣೆ ಮತ್ತು ಮೌಲ್ಯಮಾಪನ ಸಮಾಲೋಚಕ – ಬಿಸಿಎ, ಬಿಇ ಪದವಿ, ಪರಿಸರ ಸಮಾಲೋಚಕ – ಎನ್ವರಮೆಂಟಲ್​ ಇಂಜಿನಿಯರಿಂಗ್​ನಲ್ಲಿ ಬಿಇ ಅಥವಾ ಬಿಟೆಕ್​, ಸಾಮಾಜಿಕ ಅಭಿವೃದ್ಧಿ ಸಮಾಲೋಚಕ – ಎಂಎಸ್​​ಡಬ್ಲ್ಯೂ, ಸಮಾಜ ಶಾಸ್ತ್ರದಲ್ಲಿ ಎಂಎ, ಗ್ರಾಮೀಣಾಭಿವೃದ್ಧಿಯಲ್ಲಿ ಎಂಬಿಎ-ಎಚ್​ಆರ್​ಎಂ, ಹಣಕಾಸು ಸಮಾಲೋಚಕ – ಎಂಬಿಎ, ಎಂಕಾಂ

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಐದು ವರ್ಷ ಹುದ್ದೆ ಕಾರ್ಯ ನಿರ್ವಹಿಸಿದ ಅನುಭವ ಅಥವಾ ರಾಜ್ಯ ಸರ್ಕಾರದಲ್ಲಿ 2 ವರ್ಷಗಳ ಕಾಲ ಸಂಬಂಧಿಸಿದ ಕ್ಷೇತ್ರದಲ್ಲಿ ಹುದ್ದೆ ಅನುಭವ ಹೊಂದಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.

ಮಾಸಿಕ 50,000 ರಿಂದ 75 ಸಾವಿರ ನಿಗದಿ ಮಾಡಲಾಗಿದ್ದು, ಅಭ್ಯರ್ಥಿಗಳ ಅನುಭವದ ಮೇಲೆ ಇದರ ನಿಗದಿ ಆಗಲಿದೆ. ಅರ್ಜಿ ಸಲ್ಲಿಕೆ ಅಭ್ಯರ್ಥಿಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈಮರ್ಲ್ಯ ಇಲಾಖೆಯ (ವಿಶ್ವ ಬ್ಯಾಂಕ್​ ಪ್ರಾಜೆಕ್ಟ್​​)ನ ಪುಟದಲ್ಲಿ ಆನ್​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಜೊತೆಗೆ ಕಾರ್ಯ ನಿರ್ವಹಣೆ ಮಾಡಬೇಕಾದ ಮೂರು ಜಿಲ್ಲೆಗಳ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸುವಾಗ ಈ ಹುದ್ದೆಗೆ ತಾವು ಹೇಗೆ ಸೂಕ್ತರು ಎಂಬ ಕುರಿತು 100 ಪದಗಳಲ್ಲಿ ವಿವರಣೆಯನ್ನು swachhamevajayate.org ಇಲ್ಲಿ ನವೆಂಬರ್​ 4ಕ್ಕೆ ಮುನ್ನ ಸಲ್ಲಿಸಬೇಕಿದೆ. ನೀಡಬೇಕಿದೆ. ಈ ಹುದ್ದೆಗೆ ಅಭ್ಯರ್ಥಿಗಳನ್ನು ಶಾರ್ಟ್​​ ಲಿಸ್ಟ್​​ ನಡೆಸಿ ದಾಖಲಾತಿ ಪರಿಶೀಲನೆ ಮಾಡಲಾಗುವುದು. ಬಳಿಕ ಸಂದರ್ಶನ ನಡೆಸಲಾಗುವುದು

ಈ ಹುದ್ದೆಗೆ ಅಕ್ಟೋಬರ್​ 19ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 4 ಆಗಿದೆ. ಈ ಹುದ್ದೆಗ ಕುರಿತು ಹೆಚ್ಚಿನ ಸ್ಪಷ್ಟೀಕರಣಕ್ಕೆ recruitment.rdwsd@gmail.com ಇಲ್ಲಿಗೆ ಸಂಪರ್ಕಿಸಬಹುದು. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗೆ https://www.ksrwspdtsuonline.in/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top